Karun Nair, Manish Pandey 
ಕ್ರಿಕೆಟ್

ಆಫ್ರಿಕಾ ಪ್ರವಾಸ: ಭಾರತ 'ಎ' ತಂಡಕ್ಕೆ ಕರುಣ್ ನಾಯರ್, ಮನಿಶ್ ಪಾಂಡೆ ಸಾರಥ್ಯ

ಮುಂದಿನ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ಎ ತಂಡದ ನಾಯಕನಾಗಿ ಕರುಣ್ ನಾಯರ್ ಮತ್ತು ಮನೀಷ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ...

ನವದೆಹಲಿ: ಮುಂದಿನ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ಎ ತಂಡದ ನಾಯಕನಾಗಿ ಕರುಣ್ ನಾಯರ್ ಮತ್ತು ಮನೀಷ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. 
ಆಫ್ರಿಕಾ ಪ್ರವಾಸದಲ್ಲಿ ಭಾರತ ಎ ತಂಡ ಟೆಸ್ಟ್ ಮತ್ತು ಏಕದಿನ ಸರಣಿಗಳನ್ನು ಆಡಲಿದೆ. ಏಕದಿನ ಪಂದ್ಯಕ್ಕೆ ಮನೀಷ್ ಪಾಂಡೆ ಅವರು ನೇತೃತ್ವ ವಹಿಸಿದರೆ, ಟೆಸ್ಟ್ ಗೆ ಕರುಣ್ ನಾಯರ್ ನಾಯಕತ್ವ ವಹಿಸಲಿದ್ದಾರೆ. ಇನ್ನು ಮನೀಷ್ ಪಾಂಡೆ ಗಾಯಗೊಂಡಿರುವುದರಿಂದ ಅವರು ಸಂಪೂರ್ಣ ಗುಣಮುಖರಾಗಿದ್ದರೆ ಮಾತ್ರ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ.
ತ್ರಿಕೋನ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ಎ, ಆಫ್ರಿಕಾ ಎ ಮತ್ತು ಭಾರತ ಎ ತಂಡ ಸೆಣೆಸಲಿದೆ. ಜುಲೈ 26ರಂದು ಆಸ್ಟ್ರೇಲಿಯಾ ಎ ತಂಡದೊಂದಿಗೆ ಭಾರತ ಎ ತಂಡ ಸೆಣೆಸುವುದರೊಂದಿಗೆ ತ್ರಿಕೋನ ಸರಣಿ ಪ್ರಾರಂಭಗೊಳ್ಳಲಿದೆ. 
ಏಕದಿನ ಮತ್ತು ಟೆಸ್ಟ್ ತಂಡದಲ್ಲಿ ಕರುಣ್ ನಾಯರ್ ಮತ್ತು ಜಯಂತ್ ಯಾದವ್ ಇಬ್ಬರು ಸ್ಥಾನ ಪಡೆದಿದ್ದು ಒಂದು ಪಕ್ಷ ಮನೀಷ್ ಪಾಂಡೆ ಗುಣಮುಖರಾಗದಿದ್ದರೆ ಕರುಣ್ ನಾಯರ್ ಅವರೇ ಎರಡು ಮಾದರಿಗೂ ನಾಯಕತ್ವ ವಹಿಸಲಿದ್ದಾರೆ. 
ಏಕದಿನ ತಂಡದಲ್ಲಿ ಸ್ಥಾನ ಪಡೆದ ಆಟಗಾರರು
ಮನದೀಪ್ ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಮನೀಶ್ ಪಾಂಡೆ(ನಾಯಕ), ದೀಪಕ್ ಹೂಡಾ, ಕರುಣ್ ನಾಯರ್, ಕೃನಾಲ್ ಪಾಂಡ್ಯಾ, ರಿಶಭ್ ಪಂತ್(ವಿಕಿ) ವಿಜಯ್ ಶಂಕರ್, ಅಕ್ಷರ್ ಪಡೇಲ್, ಯಜುವೇಂದ್ರ ಚಲಾಲ್, ಜಯಂತ್ ಯಾದವ್, ಬಸೀಲ್ ತಂಪಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಸಿದಾರ್ಥ್ ಕೌಲ್. 
ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದ ಆಟಗಾರರು
ಪ್ರಿಯಾಂಕ ಪಂಚಲ್, ಅಭಿನವ್ ಮುಕುಂದ್, ಶ್ರೇಯಸ್ ಅಯ್ಯರ್, ಅಂಕಿತ್ ಬಾವ್ನೆ, ಕರುಣ್ ನಾಯರ್(ನಾಯಕ), ಸುದೀಪ್ ಚಟರ್ಜಿ, ಇಶಾನ್ ಕಿಶನ್, ಹನುಮಾ ವಿಹಾರಿ, ಜಯಂತ್ ಯಾದವ್, ಶಹಾಬಜ್ ನದೀಮ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಅಂಕಿತ್ ಚೌದರಿ, ಅಂಕಿತ್ ರಜಪೂತ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT