ಸಂಗ್ರಹ ಚಿತ್ರ 
ಕ್ರಿಕೆಟ್

ನ್ಯಾಯಾಂಗ ನಿಂದನೆ ಪ್ರಕರಣ: ಅನುರಾಗ್ ಠಾಕೂರ್ ಗೆ ತಾತ್ಕಾಲಿಕ ರಿಲೀಫ್!

ಲೋಧಾ ಸಮಿತಿ ಶಿಫಾರಸ್ಸು ಜಾರಿ ಮಾಡದ ಹಿನ್ನಲೆಯಲ್ಲಿ ನ್ಯಾಯಾಂಗ ನಿಂದನೆ ತೂಗುಕತ್ತಿ ಎದುರಿಸುತ್ತಿದ್ದ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ವಿಚಾರಣೆಯಲ್ಲಿ ಖುದ್ಧು ಹಾಜರಾತಿಯಿಂದ ವಿನಾಯಿತಿ ನೀಡಿದೆ.

ನವದೆಹಲಿ: ಲೋಧಾ ಸಮಿತಿ ಶಿಫಾರಸ್ಸು ಜಾರಿ ಮಾಡದ ಹಿನ್ನಲೆಯಲ್ಲಿ ನ್ಯಾಯಾಂಗ ನಿಂದನೆ ತೂಗುಕತ್ತಿ ಎದುರಿಸುತ್ತಿದ್ದ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು,  ವಿಚಾರಣೆಯಲ್ಲಿ ಖುದ್ಧು ಹಾಜರಾತಿಯಿಂದ ವಿನಾಯಿತಿ ನೀಡಿದೆ.

ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧ ಇಂದು ಸುಪ್ರೀಂ ಕೋರ್ಟ್ ಗೆ ಅನುರಾಗ್ ಠಾಕೂರ್ ಕ್ಷಮೆ ಕೋರಿದ ಹಿನ್ನಲೆಯಲ್ಲಿ ಬಿಸಿಸಿಐ ಮಾಜಿ ಅಧ್ಯಕ್ಷರ ವಿರುದ್ಧದ ಕಠಿಣ ನಿಲುವನ್ನು ಸುಪ್ರೀಂ ಕೋರ್ಟ್ ಸಡಿಲಗೊಳಿಸಿದೆ. ಮುಂದಿನ  ಆದೇಶದವರೆಗೂ ವಿಚಾರಣೆಯಲ್ಲಿ ಖುದ್ಧು ಹಾಜರಾತಿಗೆ ವಿನಾಯಿತಿ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಅಂತೆಯೇ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಏಪ್ರಿಲ್ 17ಕ್ಕೆ ಮುಂದೂಡಿದೆ.

ಲೋಧಾ ಸಮಿತಿ ಶಿಫಾರಸ್ಸುಗಳನ್ನು ಜಾರಿಗೆ ತರುವಂತೆ ಡಿಡಿಸಿಎಗೆ ಸೂಚನೆ
ಇನ್ನು ಇದೇ ವೇಳೆ ದೆಹಲಿ ಕ್ರಿಕೆಟ್ ಮಂಡಳಿಗೂ ಹಲವು ನಿರ್ದೇಶನಗಳನ್ನು ನೀಡಿರುವ ಸುಪ್ರೀಂ ಕೋರ್ಟ್, ನೂತನವಾಗಿ ನೇಮಕವಾಗಿರುವ ದೆಹಲಿ ಕ್ರಿಕೆಟ್ ಮಂಡಳಿಯ ಆಡಳಿತ ವರ್ಗ ಕೂಡಲೇ ಲೋಧ ಸಮಿತಿ  ಶಿಫಾರಸ್ಸುಗಳನ್ನು ಜಾರಿಗೆ ತರುವಂತೆ ನಿರ್ದೇಶನ ನೀಡಿದೆ.

ಕಳೆದ ಜನವರಿ 2ರಂದು ನಡೆದಿದ್ದ ವಿಚಾರಣೆ ವೇಳೆ ಆ್ಯಮಿಕಸ್ ಕ್ಯೂರಿ ಗೋಪಾಲ್ ಸುಬ್ರಮಣಿಯನ್ ಮಾಡಿದ್ದ ನ್ಯಾಯಾಂಗ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರಿಗೆ  ನೋಟಿಸ್ ಜಾರಿ ಮಾಡಿತ್ತು. ಅಲ್ಲದೆ ಬಿಸಿಸಿಐ ಆಡಳಿತದಲ್ಲಿ ಪಾರದರ್ಶಕತೆ ತರದೇ ಲೋಧಾ ಸಮಿತಿ ಶಿಪಾರಸ್ಸುಗಳನ್ನು ಅಳವಡಿಸದ ಹಿನ್ನಲೆಯಲ್ಲಿ ಅನುರಾಗ್ ಠಾಕೂರ್ ಅವರನ್ನು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಮತ್ತು ಅಜಯ್  ಶಿರ್ಕೆ ಅವರನ್ನು ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT