ನವದೆಹಲಿ: ದೇವಧರ್ ಟೂರ್ನಿಯ ಬ್ಲೂ ಮತ್ತು ರೆಡ್ ತಂಡಗಳ ನಾಯಕತ್ವಕ್ಕೆ ರೋಹಿತ್ ಶರ್ಮಾ ಮತ್ತು ಪಾರ್ಥಿವ್ ಪಟೇಲ್ ಹೆಸರನ್ನು ಆಯ್ಕೆ ಸಮಿತಿ ಸೂಚಿಸಿದ್ದು ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ದೇವಧರ್ ಟ್ರೋಫಿಗೆ ಮರಳಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿಗಳಲ್ಲಿ ಹರ್ಭಜನ್ ಸಿಂಗ್ ಉತ್ತಮವಾಗಿ ಆಡಿದ್ದು ಅವರ ಒಂಬತ್ತು ವಿಕೆಟ್ ಗಳನ್ನು ತೆಗೆದಿದ್ದರು.
ಚಾಂಪಿಯನ್ ಟ್ರೋಫಿಗೂ ಮುನ್ನ ದೇವಧರ್ ಟ್ರೋಫಿ ನಡೆಯಲಿದ್ದು ಶಿಖರ್ ಧವನ್, ಅಂಬಟ್ಟಿ ರಾಯುಡು, ಮನೀಶ್ ಪಾಂಡೆಗೆ ಹೆಚ್ಚಿನ ಅಭ್ಯಾಸವಾಗಲಿದೆ. ಇನ್ನು ಹಿರಿಯ ವೇಗಿ ಆಶಿಶ್ ನೆಹ್ರಾ ಅವರು ಟೂರ್ನಿಯಲ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos