ರೋಹಿತ್ ಶರ್ಮಾ 
ಕ್ರಿಕೆಟ್

ದೇವಧರ್ ಟ್ರೋಫಿ: ರೋಹಿತ್, ಪಾರ್ಥಿವ್‌ಗೆ ನಾಯಕತ್ವ, ಧೋನಿ, ಯುವಿಗೆ ವಿಶ್ರಾಂತಿ

ದೇವಧರ್ ಟೂರ್ನಿಯ ಬ್ಲೂ ಮತ್ತು ರೆಡ್ ತಂಡಗಳ ನಾಯಕತ್ವಕ್ಕೆ ರೋಹಿತ್ ಶರ್ಮಾ ಮತ್ತು ಪಾರ್ಥಿವ್ ಪಟೇಲ್ ಹೆಸರನ್ನು ಆಯ್ಕೆ ಸಮಿತಿ ಸೂಚಿಸಿದ್ದು ಟೀಂ ಇಂಡಿಯಾದ...

ನವದೆಹಲಿ: ದೇವಧರ್ ಟೂರ್ನಿಯ ಬ್ಲೂ ಮತ್ತು ರೆಡ್ ತಂಡಗಳ ನಾಯಕತ್ವಕ್ಕೆ ರೋಹಿತ್ ಶರ್ಮಾ ಮತ್ತು ಪಾರ್ಥಿವ್ ಪಟೇಲ್ ಹೆಸರನ್ನು ಆಯ್ಕೆ ಸಮಿತಿ ಸೂಚಿಸಿದ್ದು ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. 
ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ದೇವಧರ್ ಟ್ರೋಫಿಗೆ ಮರಳಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿಗಳಲ್ಲಿ ಹರ್ಭಜನ್ ಸಿಂಗ್ ಉತ್ತಮವಾಗಿ ಆಡಿದ್ದು ಅವರ ಒಂಬತ್ತು ವಿಕೆಟ್ ಗಳನ್ನು ತೆಗೆದಿದ್ದರು. 
ಚಾಂಪಿಯನ್ ಟ್ರೋಫಿಗೂ ಮುನ್ನ ದೇವಧರ್ ಟ್ರೋಫಿ ನಡೆಯಲಿದ್ದು ಶಿಖರ್ ಧವನ್, ಅಂಬಟ್ಟಿ ರಾಯುಡು, ಮನೀಶ್ ಪಾಂಡೆಗೆ ಹೆಚ್ಚಿನ ಅಭ್ಯಾಸವಾಗಲಿದೆ. ಇನ್ನು ಹಿರಿಯ ವೇಗಿ ಆಶಿಶ್ ನೆಹ್ರಾ ಅವರು ಟೂರ್ನಿಯಲ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT