ರೋಹಿತ್ ಶರ್ಮಾ 
ಕ್ರಿಕೆಟ್

ದೇವಧರ್ ಟ್ರೋಫಿ: ರೋಹಿತ್, ಪಾರ್ಥಿವ್‌ಗೆ ನಾಯಕತ್ವ, ಧೋನಿ, ಯುವಿಗೆ ವಿಶ್ರಾಂತಿ

ದೇವಧರ್ ಟೂರ್ನಿಯ ಬ್ಲೂ ಮತ್ತು ರೆಡ್ ತಂಡಗಳ ನಾಯಕತ್ವಕ್ಕೆ ರೋಹಿತ್ ಶರ್ಮಾ ಮತ್ತು ಪಾರ್ಥಿವ್ ಪಟೇಲ್ ಹೆಸರನ್ನು ಆಯ್ಕೆ ಸಮಿತಿ ಸೂಚಿಸಿದ್ದು ಟೀಂ ಇಂಡಿಯಾದ...

ನವದೆಹಲಿ: ದೇವಧರ್ ಟೂರ್ನಿಯ ಬ್ಲೂ ಮತ್ತು ರೆಡ್ ತಂಡಗಳ ನಾಯಕತ್ವಕ್ಕೆ ರೋಹಿತ್ ಶರ್ಮಾ ಮತ್ತು ಪಾರ್ಥಿವ್ ಪಟೇಲ್ ಹೆಸರನ್ನು ಆಯ್ಕೆ ಸಮಿತಿ ಸೂಚಿಸಿದ್ದು ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. 
ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ದೇವಧರ್ ಟ್ರೋಫಿಗೆ ಮರಳಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿಗಳಲ್ಲಿ ಹರ್ಭಜನ್ ಸಿಂಗ್ ಉತ್ತಮವಾಗಿ ಆಡಿದ್ದು ಅವರ ಒಂಬತ್ತು ವಿಕೆಟ್ ಗಳನ್ನು ತೆಗೆದಿದ್ದರು. 
ಚಾಂಪಿಯನ್ ಟ್ರೋಫಿಗೂ ಮುನ್ನ ದೇವಧರ್ ಟ್ರೋಫಿ ನಡೆಯಲಿದ್ದು ಶಿಖರ್ ಧವನ್, ಅಂಬಟ್ಟಿ ರಾಯುಡು, ಮನೀಶ್ ಪಾಂಡೆಗೆ ಹೆಚ್ಚಿನ ಅಭ್ಯಾಸವಾಗಲಿದೆ. ಇನ್ನು ಹಿರಿಯ ವೇಗಿ ಆಶಿಶ್ ನೆಹ್ರಾ ಅವರು ಟೂರ್ನಿಯಲ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT