ಧರ್ಮಶಾಲಾ: ಆಸ್ಟ್ರೇಲಿಯಾ-ಭಾರತ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಧರ್ಮಶಾಲಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ಆಸೀಸ್ ಬ್ಯಾಟ್ ಆಯ್ಕೆ ಮಾಡಿಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ರೆನ್ಶಾರನ್ನು ಅವರನ್ನು ವೇಗಿ ಉಮೇಶ್ ಯಾದವ್ ಬೌಲ್ಡ್ ಮಾಡಿದರು. ಇದರೊಂದಿಗೆ ಆಸ್ಟ್ರೇಲಿಯಾ ಐದು ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 21 ರನ್ ಗಳಿಸಿದೆ. ಪ್ರಸ್ತುತ ಡೇವಿಡ್ ವಾರ್ನರ್ ಮತ್ತು ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಟೂರ್ನಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದು, ಧರ್ಮಶಾಲಾದ ಅಂತಿಮ ಹಾಗೂ ಕೊನೆಯ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾಗೆ ನಿರ್ಣಾಯಕ ಪಂದ್ಯವಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos