ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವನ್ ಸ್ಮಿತ್ 
ಕ್ರಿಕೆಟ್

ಮುರಳಿ ವಿಜಯ್ ವಿರುದ್ಧ ಅಶ್ಲೀಲ ಶಬ್ಧ ಬಳಕೆ: ಕ್ಷಮೆಯಾಚಿಸಿದ ಸ್ಟೀವನ್ ಸ್ಮಿತ್

ಭಾರತದ ಆರಂಭಿಕ ಆಟಗಾರ ಮುರಳಿ ವಿಜಯ್ ಅವರನ್ನು ಅಶ್ಲೀಲ ಶಬ್ದದಲ್ಲಿ ನಿಂದಿಸಿ ತೀವ್ರ ಟೀಕೆಗಳಿಗೆ ಗುರಿಯಾಗಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವನ್ ಸ್ಮಿತ್ ಅವರು ತಮ್ಮ ಹೇಳಿಕೆ ಕುರಿತಂತೆ ಮಂಗಳವಾರ ಕ್ಷಮೆಯಾಚಿಸಿದ್ದಾರೆ...

ಧರ್ಮಶಾಲಾ: ಭಾರತದ ಆರಂಭಿಕ ಆಟಗಾರ ಮುರಳಿ ವಿಜಯ್ ಅವರನ್ನು ಅಶ್ಲೀಲ ಶಬ್ದದಲ್ಲಿ ನಿಂದಿಸಿ ತೀವ್ರ ಟೀಕೆಗಳಿಗೆ ಗುರಿಯಾಗಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವನ್ ಸ್ಮಿತ್ ಅವರು ತಮ್ಮ ಹೇಳಿಕೆ ಕುರಿತಂತೆ ಮಂಗಳವಾರ ಕ್ಷಮೆಯಾಚಿಸಿದ್ದಾರೆ. 
ನಾಲ್ಕನೇ ಪಂದ್ಯ ಮುಗಿದ ಬಳಿಕ ತಮ್ಮ ವರ್ತನೆ ಕುರಿತಂತೆ ಮಾತನಾಡಿರುವ ಸ್ಮಿತ್ ಅವರು, ಸರಣಿ ಸಾಕಷ್ಟು ತೀವ್ರತೆಯನ್ನು ಪಡೆದುಕೊಂಡಿತ್ತು. ಈ ವೇಳೆ ನಾನು ನನ್ನ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದ್ದೆ. ನನ್ನ ಹೇಳಿಕೆ ಕುರಿತಂತೆ ನಾನು ಕ್ಷಮೆಯಾಸುತ್ತೇನೆಂದು ಹೇಳಿದ್ದಾರೆ. 
ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಬಹುಬೇಗನೆ ವಿಕೆಟ್'ಗಳನ್ನು ಕಳೆದುಕೊಂಡಿದ್ದ ಆಸ್ಟ್ರೇಲಿಯಾ ತಂಡ ಒತ್ತಡಕ್ಕೆ ಸಿಲುಕಿತ್ತು. ಭಾರತದ ಆಟಗಾರ ಮುರಳಿ ವಿಜಯ್, ಆಸ್ಟ್ರೇಲಿಯಾದ ಹ್ಯಾಜಲ್'ವುಡ್ ಅವರ ಕ್ಯಾಚ್ ಹಿಡಿದ ಬಳಿಕ ಔಟ್ ಎಂದು ಅಂಪೈರ್ ಬಳಿ ಬಲವಾಗಿ ಮನವಿ ಮಾಡಿದ್ದರು. ಫೀಲ್ಡ್ ಅಂಬೈರ್ ಅವರು ಔಟ್ ಕೊಟ್ಟಿದ್ದರು. ಆಧರೆ, ಟಿವಿ ರೀಪ್ಲೆಯಲ್ಲಿ ಅದು ನಾಟ್ ಔಟ್ ಆಗಿತ್ತು. 
ಮೂರನೇ ಆಂಪೈರ್ ನಾಟ್ ಔಟ್ ಎಂದು ಮತ್ತೆ ತೀರ್ಪು ನೀಡಿದ್ದರು. ಈ ವೇಳೆ ಡ್ರೆಸಿಂಗ್ ರೂಮ್'ನಲ್ಲಿದ್ದ ಸ್ಟೀವನ್ ಸ್ಮಿತ್ ಅವರು ಮುರಳಿ ವಿಜಯ್ ಅವರನ್ನು ಕೆಟ್ಟ ಶಬದ್ದದಲ್ಲಿ ನಿಂದಿಸಿದ್ದರು. ಮುರಳಿ ವಿಜಯ್ ಅವರನ್ನು ಸ್ಮಿತ್ ಅವರು ನಿಂದಿಸಿರುವುದು ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಸ್ಮಿತ್ ಅವರ ಈ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ತೀಕೆಗಳು ವ್ಯಕ್ತವಾಗತೊಡಗಿದ್ದವು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT