ಎಬಿಡಿ ವಿಲಿಯರ್ಸ್, ವಿರಾಟ್ ಕೊಹ್ಲಿ 
ಕ್ರಿಕೆಟ್

ವಿರಾಟ್ ಕೊಹ್ಲಿ ಬದಲಿಗೆ ಆರ್ಸಿಬಿಗೆ ಎಬಿಡಿ ಸಾರಥ್ಯ

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ವೇಳೆ ಭುಜದ ಗಾಯಕ್ಕೆ ತುತ್ತಾಗಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ ನ...

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ವೇಳೆ ಭುಜದ ಗಾಯಕ್ಕೆ ತುತ್ತಾಗಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ ನ ಕೆಲ ಪಂದ್ಯಗಳಿಗೆ ಅಲಭ್ಯರಾಗಲಿದ್ದು ಕೊಹ್ಲಿ ಬದಲಿಗೆ ಎಬಿಡಿ ವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥ್ಯವನ್ನು ವಹಿಸಿಕೊಳ್ಳಲಿದ್ದಾರೆ. 
ಆರ್ಸಿಬಿ ತಂಡದ ಪ್ರಧಾನ ಕೋಚ್ ಆಗಿರುವ ಡೇನಿಯಲ್ ವೆಟ್ಟೋರಿ ಸುದ್ದಿಗಾರರೊಂದಿಗೆ ಮಾತನಾಡಿದ್ದು ಈ ವೇಳೆ ವಿರಾಟ್ ಏಪ್ರಿಲ್ 2ರಂದು ತಂಡವನ್ನು ಕೂಡಿಕೊಳ್ಳಲಿದ್ದಾರೆ. ಆದರೆ ಈವರೆಗೂ ಅವರ ಫಿಟ್ನೆಸ್ ಕುರಿತು ನಮಗೆ ಖಚಿತ ಮಾಹಿತ ಇಲ್ಲ. ಕೊಹ್ಲಿ ಆಗಮಿಸಿದ ಬಳಿಕ ತಂಡದ ವೈದ್ಯರು ಹಾಗೂ ಫಿಸಿಯೋ ಅವರ ದೈಹಿಕ ಸಾಮರ್ಥ್ಯವನ್ನು ಪರಿಶೀಲಿಸಲಿದ್ದಾರೆ. ಆನಂತರ ನಮಗೆ ಅವರ ಆಟದ ಬಗ್ಗೆ ಸ್ಫಷ್ಟ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ. 
ಕಳೆದ ಆವೃತ್ತಿಯ ವಿಜೇತ ತಂಡದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರನ್ನರ್ ಅಪ್ ಆರ್ಸಿಬಿ ತಂಡ ಮೊದಲ ಪಂದ್ಯದಲ್ಲಿ ಸೆಣಸಲಿವೆ. ಹೀಗಾಗಿ ಅಭ್ಯಾಸ ಆರಂಭಿಸಿರುವ ಆರ್ಸಿಬಿ ಆಟಗಾರರಾದ ಯುಜುವೇಂದ್ರ ಚಾಹಲ್, ವೇಗಿ ಎಸ್ ಅರವಿಂದ್ ಸೇರಿದಂತೆ ಹಲವು ಗುರುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಾಲೀಮು ನಡೆಸಿದರು. ಏಪ್ರಿಲ್ 5ರ ಉದ್ಘಾಟನಾ ಪಂದ್ಯದಲ್ಲಿ ಉಭಯ ತಂಡಗಳು ಸೆಣೆಸಲಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!