ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಹರ್ಯರ್ ಖಾನ್ 
ಕ್ರಿಕೆಟ್

ಆದಾಯ ನಷ್ಟ: ಭಾರತದಿಂದ 60 ದಶಲಕ್ಷ ಪರಿಹಾರ ಕೇಳಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

ದ್ವಿಪಕ್ಷೀಯ ಸರಣಿಗಳನ್ನು ಆಡುವ ಒಪ್ಪಂದವನ್ನು ಪಾಲಿಸಲು ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ...

ಕರಾಚಿ: ದ್ವಿಪಕ್ಷೀಯ ಸರಣಿಗಳನ್ನು ಆಡುವ ಒಪ್ಪಂದವನ್ನು ಪಾಲಿಸಲು ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾರತೀಯ ಕ್ರಿಕೆಟ್ ಮಂಡಳಿಗೆ ನಿನ್ನೆ ನೊಟೀಸ್ ಕಳುಹಿಸಿದೆ. ಇದರಿಂದ ತಮಗೆ 60 ದಶಲಕ್ಷ ನಷ್ಟವಾಗುತ್ತದೆ ಎಂದು ಅದು ಹೇಳಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಜೊತೆಗೆ 2014ರಲ್ಲಿ ನಿಲುವಳಿ ಒಪ್ಪಂದವೊಂದಕ್ಕೆ ಸಹಿ ಹಾಕಿತ್ತು. ಅದರ ಪ್ರಕಾರ, ಎರಡೂ ರಾಷ್ಟ್ರಗಳು ಆರು ಸರಣಿಗಳನ್ನು ಆಡಬೇಕಿದೆ. 2015ರಿಂದ 2023ರ ಮಧ್ಯೆ 4 ಸರಣಿ ಪಂದ್ಯಗಳನ್ನು ಪಾಕಿಸ್ತಾನ ಆಯೋಜಿಸಬೇಕು.
ಆದರೆ ಭಾರತ ಮತ್ತು ಪಾಕಿಸ್ತಾನ ಮಧ್ಯೆ ರಾಯಭಾರ ಸಂಬಂಧಗಳು ಹದಗೆಟ್ಟಿರುವುದರಿಂದ ಗಡಿಭಾಗದಲ್ಲಿ ಕದನ ವಿರಾಮ ಉಲ್ಲಂಘನೆಯಾಗುತ್ತಿರುವುದರಿಂದ ಪಂದ್ಯಗಳಿಗೆ ಅನುಮೋದನೆ ನೀಡಲು ಭಾರತ ನಿರಾಕರಿಸುತ್ತಿದೆ. 
ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಶಹರ್ಯಾರ್ ಖಾನ್, ಪಾಕಿಸ್ತಾನಕ್ಕೆ ಭಾರೀ ಹಣ ನಷ್ಟವಾಗಿರುವುದರಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿಗೆ ಲೀಗಲ್ ನೊಟೀಸ್ ಕಳುಹಿಸುವ ಮೂಲಕ ನಾವು ಕಾನೂನು ಸಮರಕ್ಕೆ ಇಳಿದಿದ್ದೇವೆ ಎಂದು ಖಾನ್ ಸುದ್ದಿ ಸಂಸ್ಥೆಗೆ ತಿಳಿಸಿದರು. ಭಾರತ ಯುನೈಟೆಡ್ ಅರಬ್ ಎಮಿರೇಟ್ಸ್ ಅಥವಾ ಶ್ರೀಲಂಕಾದಲ್ಲಿ ಕೂಡ ಆಟವಾಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿದರು.
ಪಾಕಿಸ್ತಾನ ಈ ವರ್ಷದ ಅಂತ್ಯದ ತಿಂಗಳುಗಳಲ್ಲಿ ಭಾರತದೊಂದಿಗೆ ಸರಣಿ ಆಡಬೇಕಿದೆ. ಆದರೆ 2008ರ ಮುಂಬೈ ಸ್ಫೋಟದ ನಂತರ ದ್ವಿಪಕ್ಷೀಯ ಸರಣಿಯನ್ನು ಭಾರತ ನಿರಾಕರಿಸುತ್ತಾ ಬಂದಿದೆ. 
2012ರಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಭಾರತ ಪ್ರವಾಸ ಕೈಗೊಂಡಿತ್ತು. ಆದರೆ 2007ರಿಂದ ಇಲ್ಲಿಯವರೆಗೆ ಎರಡೂ ದೇಶಗಳ ತಂಡಗಳು ಸಂಪೂರ್ಣವಾಗಿ ಸರಣಿ ಆಟವಾಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT