ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಹರ್ಯರ್ ಖಾನ್ 
ಕ್ರಿಕೆಟ್

ಆದಾಯ ನಷ್ಟ: ಭಾರತದಿಂದ 60 ದಶಲಕ್ಷ ಪರಿಹಾರ ಕೇಳಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

ದ್ವಿಪಕ್ಷೀಯ ಸರಣಿಗಳನ್ನು ಆಡುವ ಒಪ್ಪಂದವನ್ನು ಪಾಲಿಸಲು ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ...

ಕರಾಚಿ: ದ್ವಿಪಕ್ಷೀಯ ಸರಣಿಗಳನ್ನು ಆಡುವ ಒಪ್ಪಂದವನ್ನು ಪಾಲಿಸಲು ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾರತೀಯ ಕ್ರಿಕೆಟ್ ಮಂಡಳಿಗೆ ನಿನ್ನೆ ನೊಟೀಸ್ ಕಳುಹಿಸಿದೆ. ಇದರಿಂದ ತಮಗೆ 60 ದಶಲಕ್ಷ ನಷ್ಟವಾಗುತ್ತದೆ ಎಂದು ಅದು ಹೇಳಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಜೊತೆಗೆ 2014ರಲ್ಲಿ ನಿಲುವಳಿ ಒಪ್ಪಂದವೊಂದಕ್ಕೆ ಸಹಿ ಹಾಕಿತ್ತು. ಅದರ ಪ್ರಕಾರ, ಎರಡೂ ರಾಷ್ಟ್ರಗಳು ಆರು ಸರಣಿಗಳನ್ನು ಆಡಬೇಕಿದೆ. 2015ರಿಂದ 2023ರ ಮಧ್ಯೆ 4 ಸರಣಿ ಪಂದ್ಯಗಳನ್ನು ಪಾಕಿಸ್ತಾನ ಆಯೋಜಿಸಬೇಕು.
ಆದರೆ ಭಾರತ ಮತ್ತು ಪಾಕಿಸ್ತಾನ ಮಧ್ಯೆ ರಾಯಭಾರ ಸಂಬಂಧಗಳು ಹದಗೆಟ್ಟಿರುವುದರಿಂದ ಗಡಿಭಾಗದಲ್ಲಿ ಕದನ ವಿರಾಮ ಉಲ್ಲಂಘನೆಯಾಗುತ್ತಿರುವುದರಿಂದ ಪಂದ್ಯಗಳಿಗೆ ಅನುಮೋದನೆ ನೀಡಲು ಭಾರತ ನಿರಾಕರಿಸುತ್ತಿದೆ. 
ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಶಹರ್ಯಾರ್ ಖಾನ್, ಪಾಕಿಸ್ತಾನಕ್ಕೆ ಭಾರೀ ಹಣ ನಷ್ಟವಾಗಿರುವುದರಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿಗೆ ಲೀಗಲ್ ನೊಟೀಸ್ ಕಳುಹಿಸುವ ಮೂಲಕ ನಾವು ಕಾನೂನು ಸಮರಕ್ಕೆ ಇಳಿದಿದ್ದೇವೆ ಎಂದು ಖಾನ್ ಸುದ್ದಿ ಸಂಸ್ಥೆಗೆ ತಿಳಿಸಿದರು. ಭಾರತ ಯುನೈಟೆಡ್ ಅರಬ್ ಎಮಿರೇಟ್ಸ್ ಅಥವಾ ಶ್ರೀಲಂಕಾದಲ್ಲಿ ಕೂಡ ಆಟವಾಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿದರು.
ಪಾಕಿಸ್ತಾನ ಈ ವರ್ಷದ ಅಂತ್ಯದ ತಿಂಗಳುಗಳಲ್ಲಿ ಭಾರತದೊಂದಿಗೆ ಸರಣಿ ಆಡಬೇಕಿದೆ. ಆದರೆ 2008ರ ಮುಂಬೈ ಸ್ಫೋಟದ ನಂತರ ದ್ವಿಪಕ್ಷೀಯ ಸರಣಿಯನ್ನು ಭಾರತ ನಿರಾಕರಿಸುತ್ತಾ ಬಂದಿದೆ. 
2012ರಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಭಾರತ ಪ್ರವಾಸ ಕೈಗೊಂಡಿತ್ತು. ಆದರೆ 2007ರಿಂದ ಇಲ್ಲಿಯವರೆಗೆ ಎರಡೂ ದೇಶಗಳ ತಂಡಗಳು ಸಂಪೂರ್ಣವಾಗಿ ಸರಣಿ ಆಟವಾಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT