ಡೇವಿಡ್ ಮಿಲ್ಲರ್ 
ಕ್ರಿಕೆಟ್

ಭಾರತ ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ದೊಡ್ಡ ನಷ್ಟ: ಆಮ್ಲಾ, ಮಿಲ್ಲರ್

ಮುಂದಿನ ತಿಂಗಳು ಇಂಗ್ಲೆಂಡ್‌ ನಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಭಾಗವಹಿಸದಿದ್ದರೆ....

ಬೆಂಗಳೂರು: ಮುಂದಿನ ತಿಂಗಳು ಇಂಗ್ಲೆಂಡ್‌ ನಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಭಾಗವಹಿಸದಿದ್ದರೆ ದೊಡ್ಡ ನಷ್ಟ ಅನುಭವಿಸಿದಂತೆ ಎಂದು ದಕ್ಷಿಣ ಆಫ್ರಿಕಾದ ಆಟಗಾರರಾದ ಹಾಶೀಂ ಆಮ್ಲಾ ಹಾಗೂ ಡೇವಿಡ್‌ ಮಿಲ್ಲರ್‌ ಅವರು ಅಭಿಪ್ರಾಯಪಟ್ಟಿದ್ದಾರೆ.
ವಿಶ್ವದಾದ್ಯಂತ ಭಾರತ ಕ್ರಿಕೆಟ್‌ ಅಭಿಮಾನಿಗಳನ್ನು ಹೊಂದಿದ್ದು, ಒಂದು ವೇಳೆ ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾಗವಹಿಸದಿದ್ದರೆ ಅಭಿಮಾನಿಗಳಿಗೆ ತುಂಬಾ ನಿರಾಸೆಯಾಗಲಿದೆ ಎಂದು ಡೇವಿಡ್‌ ಮಿಲ್ಲರ್‌ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ರೋಮಾಂಚಕಾರಿ ಚಾಂಪಿಯನ್ಸ್ ಟ್ರೋಫಿಯನ್ನು ನೋಡಲು ಬಯಸುವುದಾದರೆ ವಿಶ್ವದ ಎಲ್ಲಾ ಎಂಟು ತಂಡಗಳು ಟೂರ್ನಿಯಲ್ಲಿ ಭಾಗವಹಿಸಬೇಕು. ಒಂದು ವೇಳೆ ಭಾರತ ಭಾಗವಹಿಸದಿದ್ದರೆ ಅಭಿಮಾನಿಗಳು ದೊಡ್ಡ ನಷ್ಟ ಅನುಭವಿಸಲಿದ್ದಾರೆ ಎಂದು ಹಾಶೀಂ ಆಮ್ಲಾ ಅವರು ಹೇಳಿದ್ದಾರೆ.
ಜೂನ್ 1ರಿಂದ ಆರಂಭವಾಗುತ್ತಿರುವ ಚಾಂಪಿಯನ್ಸ್ ಟ್ರೋಫಿಗೆ ಬಿಸಿಸಿಐ ಭಾರತದ ಆಟಗಾರರನ್ನು ಆಯ್ಕೆ ಮಾಡಿ ಏಪ್ರಿಲ್‌ 25ರಂದು ತಂಡವನ್ನು ಪ್ರಕಟಿಸಬೇಕಿತ್ತು. ಆದರೆ, ಐಸಿಸಿಯ ನೂತನ ಆದಾಯ ಹಂಚಿಕೆ ನೀತಿಯನ್ನು ವಿರೋಧಿಸಿದ್ದ ಬಿಸಿಸಿಐ ಪ್ರತಿಭಟನೆ ವ್ಯಕ್ತಪಡಿಸುವ ಉದ್ದೇಶದಿಂದ ಈ ವರೆಗೆ ತಂಡವನ್ನು ಪ್ರಕಟಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT