ಜಾವಗಲ್ ಶ್ರೀನಾಥ್ 
ಕ್ರಿಕೆಟ್

2017ರ ಐಪಿಎಲ್ ಫೈನಲ್ ಪಂದ್ಯಕ್ಕೆ ಕನ್ನಡಿಗ ಜಾವಗಲ್ ಶ್ರೀನಾಥ್ ರೆಫರಿ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾದ ಮಾಜಿ ಆಟಗಾರ ಕನ್ನಡಿಗ ಜಾವಗಲ್ ಶ್ರೀನಾಥ್ ಅವರು...

ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾದ ಮಾಜಿ ಆಟಗಾರ ಕನ್ನಡಿಗ ಜಾವಗಲ್ ಶ್ರೀನಾಥ್ ಅವರು ರೆಫರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. 
ಮುಂಬೈನಲ್ಲಿ ಮೇ 16ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯ ಹಾಗೂ ಮೇ 21ರಂದು ಹೈದರಾಬಾದ್ ನಲ್ಲಿ ನಡೆಯಲಿರುವ ಫೈನಲ್ ಪಂದ್ಯಗಳ ರೆಫರಿಯಾಗಿ ಜಾವಗಲ್ ಶ್ರೀನಾಥ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. 
ಐಪಿಎಲ್ ಪ್ಲೇ-ಆಫ್ ಪಂದ್ಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬಿಡುಗಡೆ ಮಾಡಿದೆ. ಇದರಲ್ಲಿ ಎಸ್ ರವಿ, ಸಿ ಷಂಸುದ್ದೀನ್, ಒ ನಂದನ್, ಯಶವಂತ್ ಬರ್ದೆ, ಅನಿಲ್ ಚೌಧರಿ, ನಿತಿನ್ ಮೆನನ್, ಎ ನಂದ ಕಿಶೋರ್, ಕೆಎನ್ ಅನಂತ ಪದ್ಮನಾಭನ್ ಮತ್ತು ನಿಗೆಲ್ ಲಾಂಗ್ ಅವರು ಅಂಗಳದ ಅಂಪೈರ್ ಗಳಾಗಿ ಕೆಲಸ ಮಾಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT