ಸಂಗ್ರಹ ಚಿತ್ರ 
ಕ್ರಿಕೆಟ್

ರಣಜಿ ಸಂಭಾವನೆ ವಿಚಾರ: ಕೋಚ್ ಅನಿಲ್ ಕುಂಬ್ಳೆಗೆ ಭಜ್ಜಿ ಪತ್ರ!

ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ದೇಶೀ ಕ್ರಿಕೆಟಿಗರ ಪರ ಬ್ಯಾಟ್ ಬೀಸಿದ್ದು, ರಣಜಿ ಆಟಗಾರರ ಸಂಭಾವನೆ ಹೆಚ್ಚಿಸುವಂತೆ ಕೋಚ್ ಅನಿಲ್ ಕುಂಬ್ಳೆ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ನವದೆಹಲಿ: ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ದೇಶೀ ಕ್ರಿಕೆಟಿಗರ ಪರ ಬ್ಯಾಟ್ ಬೀಸಿದ್ದು, ರಣಜಿ ಆಟಗಾರರ ಸಂಭಾವನೆ ಹೆಚ್ಚಿಸುವಂತೆ ಕೋಚ್ ಅನಿಲ್ ಕುಂಬ್ಳೆ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಮೂಲಗಳ ಪ್ರಕಾರ ಇದೇ ಮೇ 21ರಂದು ಸಿಒಎ ಅಧಿಕಾರಿಗಳೊಂದಿಗೆ ಅನಿಲ್ ಕುಂಬ್ಳೆ ಚರ್ಚೆ ನಡೆಸಲಿದ್ದು, ಕ್ರಿಕೆಟ್ ಆಟಗಾರರ ಸಂಭಾವನೆ ಕುರಿತು ಚರ್ಚಿಸಲಿದ್ದಾರೆ. ಇದೇ ಕಾರಣಕ್ಕೆ ಭಜ್ಜಿ ಕೋಚ್ ಅನಿಲ್ ಕುಂಬ್ಳೆ ಅವರಿಗೆ ಪತ್ರ  ಬರೆದಿದ್ದು, ದೇಶೀ ಕ್ರಿಕೆಟಿಗರ ಸಂಭಾವನೆ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆಗೆ ದೇಶೀ ಕ್ರಿಕೆಟಿಗರ ಹಣಕಾಸಿನ ಸಮಸ್ಯೆಯ ಬಗ್ಗೆ ಬಿಸಿಸಿಐ ಗಮನಕ್ಕೆ ತರುವಂತೆ ಭಜ್ಜಿ  ಪತ್ರ ಬರೆದಿದ್ದು, ಮೇ 21 ರಂದು ಕುಂಬ್ಳೆ ಬಿಸಿಸಿಐನ ಆಡಳಿತಾಧಿಕಾರಿಗಳ ಎದುರು ಸಂಭಾವನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಷಯ ಮಂಡಿಸಲಿದ್ದಾರೆ.

"ದೇಶೀಯ ಮಟ್ಟದ ಕ್ರಿಕೆಟ್ ಪಂದ್ಯಗಳಲ್ಲಿ ಆಡುವ ಆಟಗಾರರಿಗೆ ಕೇವಲ 1.5 ಲಕ್ಷ ರೂ. ಸಂಭಾವನೆ ಸಿಗುತ್ತಿದ್ದು, ಕಳೆದ ಎರಡು ಮೂರು ವರ್ಷಗಳಿಂದ ರಣಜಿ ಆಡುವವನಾಗಿ ನನ್ನ ಸಹ ಆಟಗಾರರು ಹಣಕಾಸಿನ ವಿಚಾರಕ್ಕೆ  ಪರದಾಡುವುದನ್ನು ನೋಡಿದ್ದೇನೆ. ದಯಮಾಡಿ ಇವರ ಸಮಸ್ಯೆಯತ್ತ ಬಿಸಿಸಿಐ ಗಮನಹರಿಸುವಂತೆ ಮಾಡಿ’ ಎಂದು ಭಜಿ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT