ಸಂಗ್ರಹ ಚಿತ್ರ 
ಕ್ರಿಕೆಟ್

ರಣಜಿ ಸಂಭಾವನೆ ವಿಚಾರ: ಕೋಚ್ ಅನಿಲ್ ಕುಂಬ್ಳೆಗೆ ಭಜ್ಜಿ ಪತ್ರ!

ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ದೇಶೀ ಕ್ರಿಕೆಟಿಗರ ಪರ ಬ್ಯಾಟ್ ಬೀಸಿದ್ದು, ರಣಜಿ ಆಟಗಾರರ ಸಂಭಾವನೆ ಹೆಚ್ಚಿಸುವಂತೆ ಕೋಚ್ ಅನಿಲ್ ಕುಂಬ್ಳೆ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ನವದೆಹಲಿ: ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ದೇಶೀ ಕ್ರಿಕೆಟಿಗರ ಪರ ಬ್ಯಾಟ್ ಬೀಸಿದ್ದು, ರಣಜಿ ಆಟಗಾರರ ಸಂಭಾವನೆ ಹೆಚ್ಚಿಸುವಂತೆ ಕೋಚ್ ಅನಿಲ್ ಕುಂಬ್ಳೆ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಮೂಲಗಳ ಪ್ರಕಾರ ಇದೇ ಮೇ 21ರಂದು ಸಿಒಎ ಅಧಿಕಾರಿಗಳೊಂದಿಗೆ ಅನಿಲ್ ಕುಂಬ್ಳೆ ಚರ್ಚೆ ನಡೆಸಲಿದ್ದು, ಕ್ರಿಕೆಟ್ ಆಟಗಾರರ ಸಂಭಾವನೆ ಕುರಿತು ಚರ್ಚಿಸಲಿದ್ದಾರೆ. ಇದೇ ಕಾರಣಕ್ಕೆ ಭಜ್ಜಿ ಕೋಚ್ ಅನಿಲ್ ಕುಂಬ್ಳೆ ಅವರಿಗೆ ಪತ್ರ  ಬರೆದಿದ್ದು, ದೇಶೀ ಕ್ರಿಕೆಟಿಗರ ಸಂಭಾವನೆ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆಗೆ ದೇಶೀ ಕ್ರಿಕೆಟಿಗರ ಹಣಕಾಸಿನ ಸಮಸ್ಯೆಯ ಬಗ್ಗೆ ಬಿಸಿಸಿಐ ಗಮನಕ್ಕೆ ತರುವಂತೆ ಭಜ್ಜಿ  ಪತ್ರ ಬರೆದಿದ್ದು, ಮೇ 21 ರಂದು ಕುಂಬ್ಳೆ ಬಿಸಿಸಿಐನ ಆಡಳಿತಾಧಿಕಾರಿಗಳ ಎದುರು ಸಂಭಾವನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಷಯ ಮಂಡಿಸಲಿದ್ದಾರೆ.

"ದೇಶೀಯ ಮಟ್ಟದ ಕ್ರಿಕೆಟ್ ಪಂದ್ಯಗಳಲ್ಲಿ ಆಡುವ ಆಟಗಾರರಿಗೆ ಕೇವಲ 1.5 ಲಕ್ಷ ರೂ. ಸಂಭಾವನೆ ಸಿಗುತ್ತಿದ್ದು, ಕಳೆದ ಎರಡು ಮೂರು ವರ್ಷಗಳಿಂದ ರಣಜಿ ಆಡುವವನಾಗಿ ನನ್ನ ಸಹ ಆಟಗಾರರು ಹಣಕಾಸಿನ ವಿಚಾರಕ್ಕೆ  ಪರದಾಡುವುದನ್ನು ನೋಡಿದ್ದೇನೆ. ದಯಮಾಡಿ ಇವರ ಸಮಸ್ಯೆಯತ್ತ ಬಿಸಿಸಿಐ ಗಮನಹರಿಸುವಂತೆ ಮಾಡಿ’ ಎಂದು ಭಜಿ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT