ಮುಂಬೈ ಇಂಡಿಯನ್ಸ್ 
ಕ್ರಿಕೆಟ್

ಮುಂಬೈ ಇಂಡಿಯನ್ಸ್ ಮುಡಿಗೇರಿದ ಐಪಿಎಲ್ 2017 ಚಾಂಪಿಯನ್ಸ್ ಟ್ರೋಫಿ

ಹೈದರಾಬಾದ್ ನಲ್ಲಿ ನಡೆದ ಐಪಿಎಲ್ 2017 ರ ಅಂತಿಮ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ಹೈದರಾಬಾದ್: ಹೈದರಾಬಾದ್ ನಲ್ಲಿ ನಡೆದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್-ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ 2017 ರ ಅಂತಿಮ ಪಂದ್ಯದಲ್ಲಿ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಕೇವಲ ಒಂದು ರನ್ ಅಂತರದಿಂದ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 
ನಿಗದಿತ 20 ಓವರ್ ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳ ನಷ್ಟಕ್ಕೆ 129 ರನ್ ಗಳನ್ನು ಕಲೆಹಾಕಿ ಆರ್ ಪಿಎಸ್ ತಂಡಕ್ಕೆ 130 ರನ್ ಗಳ ಗುರಿ ನೀಡಿತ್ತು. ಮುಂಬೈ ಇಂಡಿಯನ್ಸ್ ತಂಡವನ್ನು 129 ರನ್ ಗಳಿಗೆ ಕಟ್ಟಿಹಾಕುವುದರಲ್ಲಿ ಆರ್ ಪಿಎಸ್ ಪರ ಬೌಲರ್ ಗಳಾದ ಜಯದೇವ್ ಉನಾಡ್ಕಟ್ ಹಾಗೂ ಡ್ಯಾನ್ ಕ್ರಿಶ್ಚಿಯನ್ ಪ್ರಮುಖ ಪಾತ್ರ ವಹಿಸಿದ್ದರು. ಮುಂಬೈ ಇಂಡಿಯನ್ಸ್ ಪರ ಕೃನಾಲ್ ಪಾಂಡ್ಯ ಅತ್ಯಂತ ಹೆಚ್ಚು ಅಂದರೆ 38 ಎಸೆತಗಳಲ್ಲಿ 47 ರನ್ ಗಳನ್ನು ದಾಖಲಿಸಿ ತಂಡ  129 ರನ್ ಗಳನ್ನು ಪೇರಿಸಲು ನೆರವಾದರು. 
ಮುಂಬೈ ಇಂಡಿಯನ್ಸ್ ತಂಡ ನೀಡಿದ್ದ ರನ್ ಗುರಿಯನ್ನು ಬೆನ್ನಟ್ಟಿದ ಆರ್ ಪಿಎಸ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಸ್ಟೀವ್ ಸ್ಮಿತ್ ಹಾಗೂ ಎಂಎಸ್ ಧೋನಿಯ ಸಮಯೋಚಿತ ಆಟ ನೆರವಾಯಿತಾದರೂ ಕೊನೆ ಕ್ಷಣದಲ್ಲಿ ಸರಣಿ ವಿಕೆಟ್ ಪತನ ತಂಡದ ಗೆಲುವಿನ ಕನಸನ್ನು ಭಗ್ನಗೊಳಿಸಿತು. ತಂಡ 17 ರನ್ ಗಳನ್ನು ಗಳಿಸಿದ್ದಾಗ ಪ್ರಾರಂಭಿಕ ಆಟಗಾರ ರಾಹುಲ್ ತ್ರಿಪಾಟಿ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಂತರ ಸ್ಟೀವ್ ಸ್ಮಿತ್ ಹಾಗೂ ಅಜಿಂಕ್ಯಾ ರೆಹಾನೆ ತಂಡಕ್ಕೆ ಆಸರೆಯಾದರು. 
ಆದರೆ ಅಜಿಂಕ್ಯಾ ರೆಹಾನೆ 44 ರನ್ ಗಳಿಸುತ್ತಿದ್ದಂತೆಯೇ ವಿಕೆತ್ ಒಪ್ಪಿಸಿದಾಗ ತಂಡದ ಮೊತ್ತ ಕೇವಲ 71.  ನಂತರ ಕೆಲಕಾಲ ಧೋನಿ ಹಾಗೂ ಸ್ಟೀವ್ ಸ್ಮಿತ್ ಜೊತೆಯಾಟ ಆಡಿದರಾದರೂ ಧೋನಿ ವೇಗವಾಗಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಗೆಲುವಿಗೆ 7 ರನ್ ಅಗತ್ಯವಿದ್ದಾಗ ಸ್ಟೀವ್ ಸ್ಮಿತ್ ಸಹ ವಿಕೆಟ್ ಒಪ್ಪಿಸಿದ್ದು ತಂಡಕ್ಕೆ ಮಹತ್ವದ ಘಟ್ಟದಲ್ಲಿ ಹಿನ್ನೆಡೆ ಉಂಟಾಗಲು ಕಾರಣವಾಯಿತು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT