ಸಂಗ್ರಹ ಚಿತ್ರ 
ಕ್ರಿಕೆಟ್

ಗಡಿಯಲ್ಲಿ ಭಯೋತ್ಪಾದನೆ ನಿಲ್ಲುವವರೆಗೂ ಭಾರತ-ಪಾಕ್ ಕ್ರಿಕೆಟ್ ಸಾಧ್ಯವಿಲ್ಲ: ವಿಜಯ್ ಗೋಯೆಲ್

ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧ ಸರ್ಕಾರದ ನಿಲುವನ್ನು ಕ್ರೀಡಾ ಸಚಿವ ವಿಜಯ್ ಗೋಯಲ್ ಪುನರುಚ್ಚರಿಸಿದ್ದಾರೆ. ಗಡಿಯಲ್ಲಿ ಭಯೋತ್ಪಾದನೆ ..

ನವದೆಹಲಿ: ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧ ಸರ್ಕಾರದ ನಿಲುವನ್ನು ಕ್ರೀಡಾ ಸಚಿವ ವಿಜಯ್ ಗೋಯಲ್ ಪುನರುಚ್ಚರಿಸಿದ್ದಾರೆ. ಗಡಿಯಲ್ಲಿ ಭಯೋತ್ಪಾದನೆ ನಿರಂತರವಾಗಿ ನಡೆಯುತ್ತಿರುವಾಗ ಪಾಕಿಸ್ತಾನದ ಜೊತೆ ಕ್ರಿಕೆಟ್ ಪಂದ್ಯ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

2007 ರಿಂದ ಭಾರತ ತಂಡ ಯಾವುದೇ ಪಾಕ್ ಜೊತೆ ಯಾವುದೇ ಪಂದ್ಯದ್ಲಲಿ ಭಾಗಿಯಾಗಿಲ್ಲ,  ಆಧರೆ 2012/13 ರಲ್ಲಿ  ಪಾಕಿಸ್ತಾನ ತಂಡ ಭಾರತ ಪ್ರವಾಸ ಕೈಗೊಂಡು ಮೂರು ಅಂತರರಾಷ್ಟ್ರೀಯ ಏಕದಿನ  ಹಾಗೂ ಎರಡು ಟಿ-20 ಪಂದ್ಯಗಳನ್ನಾಡಿತ್ತು.

ಯಾವುದೇ ಸರಣಿಯ ಬಗ್ಗೆ ಪಾಕ್ ಜೊತೆ ಪ್ರಸ್ತಾವನೆಗೂ ಮುನ್ನ ಬಿಸಿಸಿಐ ಭಾರತೀಯ ಸರ್ಕಾರದ ಕಡ್ಜಾಯವಾಗಿ ಚರ್ಚಿಸಬೇಕು ಎಂದು ವಿಜಯ್ ಗೋಯೆಲ್ ಹೇಳಿದ್ದಾರೆ. ಕ್ರಿಕೆಟ್ ಮತ್ತು ಭಯೊತ್ಪಾದನೆ ಒಟ್ಟೊಟ್ಟಿಗೆ ನಡೆಯಲು ಸಾಧ್ಯವಿಲ್ಲ. ಕಾಶ್ಮೀರದಲ್ಲಿ ಪಾಕಿಸ್ತಾನ ಉಗ್ರವಾದವನ್ನು ಹರಡುತ್ತಿದೆ. ಪರಿಸ್ಥಿತಿ ಈ ರೀತಿ ಇರುವಾಗ ನಾವು ಯಾವುದೇ ದ್ವಿಪಕ್ಷೀಯ ಸರಣಿ ಪಂದ್ಯಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನ ವಿರುದ್ಧ ದ್ವಿಪಕ್ಷೀಯ ಸರಣಿ ಪಂದ್ಯವಾಡಲು ಭಾರತಕ್ಕೆ ಯಾವುದೇ ವಿರೋಧವಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌಧರಿ ಹೇಳಿಕೆ ಹಿನ್ನೆಲೆಯಲ್ಲಿ ವಿಜಯ್ ಗೋಯೆಲ್ ಪ್ರತಿಕ್ರಿಯಿಸಿದ್ದಾರೆ. 

ನಮಗೆ ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಆಡಲು ಯಾವುದೇ ತೊಂದರೆಯಿಲ್ಲ, ಆದರೇ  ಇದಕ್ಕೆ ಸರ್ಕಾರದ ಅನುಮತಿಯಿಲ್ಲದೇ ಹೋದರೆ ಯಾವುದೇ ಸರಣಿಯೂ ಸಾಧ್ಯವಿಲ್ಲ ಎಂದು ಅವರು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT