ಮಾಯಾಂಕ್ ಅಗರ್ವಾಲ್ 
ಕ್ರಿಕೆಟ್

ರಣಜಿ ಟ್ರೋಫಿ ಕ್ರಿಕೆಟ್: ತ್ರಿಶತಕ ಸಿಡಿಸಿದ ಮಯಾಂಕ್, ಬೃಹತ್ ಮೊತ್ತ ದಾಖಲಿಸಿದ ಕರ್ನಾಟಕ

ಮಹಾರಾಷ್ಟ್ರ ವಿರುದ್ಧ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕದ ಮಯಾಂಕ್ ಅಗರ್ವಾಲ್ ಭರ್ಜರಿ ತ್ರಿಶತಕವನ್ನು ಗಳಿಸಿದ್ದು ರಾಜ್ಯ ತಂಡ ಬೃಹತ್ ಮೊತ್ತ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ.

ಪುಣೆ: ಮಹಾರಾಷ್ಟ್ರ ವಿರುದ್ಧ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕದ ಮಯಾಂಕ್ ಅಗರ್ವಾಲ್ ಭರ್ಜರಿ ತ್ರಿಶತಕವನ್ನು ಗಳಿಸಿದ್ದು ರಾಜ್ಯ ತಂಡ ಬೃಹತ್ ಮೊತ್ತ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ. 
ಮಹಾರಾಷ್ಟ್ರ ವಿರುದ್ಧ ನಡೆಯುತ್ತಿರುವ ರಣಜಿಯ ಎರಡನೆ ದಿನದಾಟದ ಅಂತ್ಯಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಮಯಾಂಕ್ ಅಗರ್‍ವಾಲ್ ಹಾಗೂ ಕರುಣ್‍ನಾಯರ್ ಇಂದು ಸಹ ಅದ್ಭುತ ಆಟ ಮುಂದುವರಿಸಿದರು.
ಮಹಾರಾಷ್ಟ್ರ ಮೊದಲ ಇನಿಂಗ್ಸ್ ನಲ್ಲಿ 245 ರನ್ ಗಳಿಸಿದ್ದು ಇದಕ್ಕೆ ಉತ್ತರವಾಗಿ ಕರ್ನಾಟಕ 5 ವಿಕೆಟ್ ನಷ್ಟಕ್ಕೆ 628 ರನ್ ಗಳಿಸಿ 383 ರನ್ ಗಳ ಮುನ್ನಡೆ ದಾಖಲಿಸಿದೆ.
ಮೂರನೇ ದಿನದಾಟದಲ್ಲಿ ರುಣ್‍ನಾಯರ್ (116 ರನ್,13 ಬೌಂಡರಿ), ಕೆ.ಗೌತಮ್ (11 ರನ್)  ಗಳಿಸಿ ವಿಕೆಟ್ ಒಪ್ಪಿಸಿದ್ದರೆ ಮಯಾಂಕ್ ಅಜೇಯರಾಗಿ ಉಳಿದರು. ಇವರು 494 ಬಾಲ್ ಗಳಲ್ಲಿ ಅಜೇಯವಾಗಿ 304 ರನ್ ಗಳಿಸಿದರು. ಇದರಲ್ಲಿ  28 ಬೌಂಡರಿ ಮತ್ತು 4 ಸಿಕ್ಸರ್ ಸೇರಿದೆ. ಈ ಮೂಲಕ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ತ್ರಿಶತಕ ಭಾರಿಸಿದ ಕರ್ನಾಟಕದ ಮೂರನೇ ಮತ್ತು ಭಾರತದ 43 ನೇ ಬ್ಯಾಟ್ಸ್ ಮನ್ ಎಂಬ ದಾಖಲೆಗೆ ಮಯಾಂಕ್ ಪಾತ್ರರಾದರು.
ಮಯಾಂಕ್ ತ್ರಿಶತಕ ಗಳಿಸುತ್ತಿದ್ದಂತೆಯೇ ನಾಯಕ ವಿನಯ್ ಕುಮಾರ್ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT