ಮಾಯಾಂಕ್ ಅಗರ್ವಾಲ್ 
ಕ್ರಿಕೆಟ್

ರಣಜಿ ಟ್ರೋಫಿ ಕ್ರಿಕೆಟ್: ತ್ರಿಶತಕ ಸಿಡಿಸಿದ ಮಯಾಂಕ್, ಬೃಹತ್ ಮೊತ್ತ ದಾಖಲಿಸಿದ ಕರ್ನಾಟಕ

ಮಹಾರಾಷ್ಟ್ರ ವಿರುದ್ಧ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕದ ಮಯಾಂಕ್ ಅಗರ್ವಾಲ್ ಭರ್ಜರಿ ತ್ರಿಶತಕವನ್ನು ಗಳಿಸಿದ್ದು ರಾಜ್ಯ ತಂಡ ಬೃಹತ್ ಮೊತ್ತ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ.

ಪುಣೆ: ಮಹಾರಾಷ್ಟ್ರ ವಿರುದ್ಧ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕದ ಮಯಾಂಕ್ ಅಗರ್ವಾಲ್ ಭರ್ಜರಿ ತ್ರಿಶತಕವನ್ನು ಗಳಿಸಿದ್ದು ರಾಜ್ಯ ತಂಡ ಬೃಹತ್ ಮೊತ್ತ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ. 
ಮಹಾರಾಷ್ಟ್ರ ವಿರುದ್ಧ ನಡೆಯುತ್ತಿರುವ ರಣಜಿಯ ಎರಡನೆ ದಿನದಾಟದ ಅಂತ್ಯಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಮಯಾಂಕ್ ಅಗರ್‍ವಾಲ್ ಹಾಗೂ ಕರುಣ್‍ನಾಯರ್ ಇಂದು ಸಹ ಅದ್ಭುತ ಆಟ ಮುಂದುವರಿಸಿದರು.
ಮಹಾರಾಷ್ಟ್ರ ಮೊದಲ ಇನಿಂಗ್ಸ್ ನಲ್ಲಿ 245 ರನ್ ಗಳಿಸಿದ್ದು ಇದಕ್ಕೆ ಉತ್ತರವಾಗಿ ಕರ್ನಾಟಕ 5 ವಿಕೆಟ್ ನಷ್ಟಕ್ಕೆ 628 ರನ್ ಗಳಿಸಿ 383 ರನ್ ಗಳ ಮುನ್ನಡೆ ದಾಖಲಿಸಿದೆ.
ಮೂರನೇ ದಿನದಾಟದಲ್ಲಿ ರುಣ್‍ನಾಯರ್ (116 ರನ್,13 ಬೌಂಡರಿ), ಕೆ.ಗೌತಮ್ (11 ರನ್)  ಗಳಿಸಿ ವಿಕೆಟ್ ಒಪ್ಪಿಸಿದ್ದರೆ ಮಯಾಂಕ್ ಅಜೇಯರಾಗಿ ಉಳಿದರು. ಇವರು 494 ಬಾಲ್ ಗಳಲ್ಲಿ ಅಜೇಯವಾಗಿ 304 ರನ್ ಗಳಿಸಿದರು. ಇದರಲ್ಲಿ  28 ಬೌಂಡರಿ ಮತ್ತು 4 ಸಿಕ್ಸರ್ ಸೇರಿದೆ. ಈ ಮೂಲಕ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ತ್ರಿಶತಕ ಭಾರಿಸಿದ ಕರ್ನಾಟಕದ ಮೂರನೇ ಮತ್ತು ಭಾರತದ 43 ನೇ ಬ್ಯಾಟ್ಸ್ ಮನ್ ಎಂಬ ದಾಖಲೆಗೆ ಮಯಾಂಕ್ ಪಾತ್ರರಾದರು.
ಮಯಾಂಕ್ ತ್ರಿಶತಕ ಗಳಿಸುತ್ತಿದ್ದಂತೆಯೇ ನಾಯಕ ವಿನಯ್ ಕುಮಾರ್ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?