ದೆಹಲಿ-ಉತ್ತರ ಪ್ರದೇಶ ರಣಜಿ ಪಂದ್ಯದಲ್ಲಿ ಭದ್ರತಾ ಲೋಪ! 
ಕ್ರಿಕೆಟ್

ದೆಹಲಿ-ಉತ್ತರ ಪ್ರದೇಶ ರಣಜಿ ಪಂದ್ಯದಲ್ಲಿ ಭದ್ರತಾ ಲೋಪ!

ದೆಹಲಿಯಲ್ಲಿ ನಡೆಯುತ್ತಿರುವ ದೆಹಲಿ-ಉತ್ತರ ಪ್ರದೇಶ ರಣಜಿ ಪಂದ್ಯದಲ್ಲಿ ಭದ್ರತಾ ಲೋಪ ಸಂಭವಿಸಿದೆ.

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ದೆಹಲಿ-ಉತ್ತರ ಪ್ರದೇಶ ರಣಜಿ ಪಂದ್ಯದಲ್ಲಿ ಭದ್ರತಾ ಲೋಪ ಸಂಭವಿಸಿದೆ. 
ಪಾಲಂ ಏರ್ ಫೋರ್ಸ್ ಮೈದಾನದಲ್ಲಿ ಪಂದ್ಯ ನಡೆಯುತ್ತಿರುವಾಗಲೇ ವ್ಯಕ್ತಿಯೋರ್ವ ಪಿಚ್ ಗೆ ಕಾರು ನುಗ್ಗಿಸಿರುವುದು ಭದ್ರತಾ ಲೋಪಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ 2 ನೇ ಇನ್ನಿಂಗ್ಸ್ ಆಡುತ್ತಿರಬೇಕಾದರೆ ಈ ಘಟನೆ ನಡೆದಿದ್ದು, ಭದ್ರತಾ ಲೋಪ ಸಂಭವಿಸಿರುವುದರಿಂದ 20 ನಿಮಿಷ ಮೊದಲೇ ದಿನದ ಆಟವನ್ನು ಮುಕ್ತಾಯಗೊಳಿಸಲಾಗಿದೆ. 
ಗಿರೀಶ್ ಶರ್ಮ ಎಂಬ ವ್ಯಕ್ತಿ ವಾಗನಾರ್ ಕಾರನ್ನು ಕ್ರೀಡಾಂಗಣದ ಒಳಗೆ ನುಗ್ಗಿಸಿದ್ದು, ಪ್ರಧಾನ ಗೇಟ್ ಬಳಿ ಭದ್ರತಾ ಸಿಬ್ಬಂದಿ ಹಾಜರಿಲ್ಲದೇ ಇದ್ದದ್ದೇ ಈ ಅವಾಂತರ ನಡೆಯಲು ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಗಿರೀಶ್ ಶರ್ಮಾನನ್ನು ವಶಕ್ಕೆ ಪಡೆದ ಏರ್ಫೋರ್ಸ್ ಪೊಲೀಸರು ನಂತರ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರಾದ ಇಶಾಂತ್ ಶರ್ಮ, ಗೌತಮ್ ಗಂಭೀರ್, ರಿಷಭ್ ಪಂತ್ ಇದ್ದರು.  
ಬೆಂಗಳೂರಿಗೆ ತೆರಳುತ್ತಿದ್ದ ನನ್ನ ಸಹೋದರಿಯನ್ನು ಏರ್ ಪೋರ್ಟ್ ಗೆ ಡ್ರಾಪ್ ಮಾಡಲು ಹೋಗಿ ವಾಪಸ್ಸಾಗುತ್ತಿದ್ದೆ. ಮಾರ್ಗ ಮಧ್ಯದಲ್ಲಿ ಕ್ರಿಕೆಟ್ ನಡೆಯುತ್ತಿರುವುದನ್ನು ಗಮನಿಸಿದೆ, ಎಂಟ್ರಿ ಗೇಟ್ ನಲ್ಲಿ ಯಾರೂ ಇರಲಿಲ್ಲ, ಅಷ್ಟೇ ಅಲ್ಲದೇ ಕಾರನ್ನು ಎಲ್ಲಿ ಪಾರ್ಕ್ ಮಾಡಬೇಕು ಎಂಬುದನ್ನು ಹೇಳಲೂ ಯಾರೂ ಇರಲಿಲ್ಲ, ಜೊತೆಗೆ ನೆಚ್ಚಿನ ಆಟಗಾರರನ್ನು ಭೇಟಿಯಾಗಬೇಕೆಂದೆನಿಸಿ ಕಾರನ್ನು ಸೀದಾ ಮೈದಾನದೊಳಗೆ ಕೊಂಡೊಯ್ದೆ ಎಂದು ಬಂಧಿತ ಗಿರೀಶ್ ಶರ್ಮಾ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT