ಧೋನಿ, ದ್ರಾವಿಡ್ ಮತ್ತು ಶ್ರೀಶಾಂತ್ 
ಕ್ರಿಕೆಟ್

ಎಲ್ಲಾ ತಿಳಿದಿದ್ದರೂ ಎಂಎಸ್ ಧೋನಿ, ರಾಹುಲ್ ದ್ರಾವಿಡ್ ನನ್ನ ಬೆಂಬಲಿಸಲಿಲ್ಲ: ಶ್ರೀಶಾಂತ್ ಕಿಡಿ

ಐಪಿಎಲ್ ಸ್ಪಾಟ್‌‌ ಫಿಕ್ಸಿಂಗ್‌‌ ಪ್ರಕರಣದಲ್ಲಿ ಭಾಗಿಯಾದ ಆರೋಪದಿಂದ ನಿಷೇಧ ಎದುರಿಸುತ್ತಿರುವ ಎನ್. ಶ್ರೀಶಾಂತ್‌‌‌‌ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ರಾಹುಲ್‌‌ ದ್ರಾವಿಡ್‌‌ ...

ನವದೆಹಲಿ: ಐಪಿಎಲ್ ಸ್ಪಾಟ್‌‌ ಫಿಕ್ಸಿಂಗ್‌‌ ಪ್ರಕರಣದಲ್ಲಿ ಭಾಗಿಯಾದ ಆರೋಪದಿಂದ ನಿಷೇಧ ಎದುರಿಸುತ್ತಿರುವ ಎನ್. ಶ್ರೀಶಾಂತ್‌‌‌‌ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ರಾಹುಲ್‌‌ ದ್ರಾವಿಡ್‌‌ ಹಾಗೂ ಎಂ.ಎಸ್‌‌.ಧೋನಿ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಖಾಸಗಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ನನಗೆ ಅಗತ್ಯವಿದ್ದಾಗ  ನಾಯಕರುಗಳಿಂದ ನೆರವು ಸಿಗಲಿಲ್ಲ. ಟೀಂ ಇಂಡಿಯಾ ಕ್ಯಾಪ್ಟನ್‌ ಆಗಿದ್ದ ಧೋನಿಯವರಿಗೆ ಭಾವನಾತ್ಮಕ ಸಂದೇಶ ರವಾನೆ ಮಾಡಿದ್ರೂ ಯಾವುದೇ ಉತ್ತರ ಸಿಗಲಿಲ್ಲ ಎಂದು ಶ್ರೀಶಾಂತ್ ಆರೋಪಿಸಿದ್ದಾರೆ,
ರಾಜಸ್ಥಾನ ರಾಯಲ್ಸ್‌ ತಂಡದ ಮೆಂಟರ್‌ ಆಗಿದ್ದ ರಾಹುಲ್‌ ದ್ರಾವಿಡ್‌ ಗೆ ನನ್ನ ಪರ ನಿಲ್ಲುವಂತೆ ಮನವಿ ಮಾಡಿಕೊಂಡರೂ ಅವರು ಸಹಾಯ ಮಾಡಲಿಲ್ಲ ಎಂದು ದೂರಿದ್ದಾರೆ.
ಫಿಕ್ಸಿಂಗ್‌‌ ವೇಳೆ ಟೀಂ ಇಂಡಿಯಾದ ಟಾಪ್‌ 10ರಲ್ಲಿದ್ದ ಆರು ಕ್ರಿಕೆಟರ್ಸ್‌‌ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು. ಆದರೆ ಭಾರತೀಯ ಕ್ರಿಕೆಟ್ ಮೇಲೆ ಪರಿಣಾಮ ಬೀರುವ ಕಾರಣ ಆಟಗಾರರ ಹೆಸರನ್ನು ಬಹಿರಂಗಗೊಳಿಸದಂತೆ ಬಿಸಿಸಿಐ ಮನವಿ ಮಾಡಿಕೊಂಡಿತ್ತು.
ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲವೇ. ನನ್ನ ವಿರುದ್ಧ ಕ್ರಮಕ್ಕೆ ಮುಂದಾದ ಬಿಸಿಸಿಐ, ಅವರ ಬೆನ್ನಿಗೆ ನಿಂತಿದ್ಯಾಕೆ ಎಂದು ಶ್ರೀಶಾಂತ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT