ವಿರಾಟ್ ಕೊಹ್ಲಿ -ಧೋನಿ 
ಕ್ರಿಕೆಟ್

ಜನ ತಮ್ಮ ಅನುಕೂಲಕ್ಕೆ ತಕ್ಕಂತೆ ಧೋನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ: ವಿರಾಟ್ ಕೊಹ್ಲಿ

ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ಟೀಕಾಕಾರರಿಗೆ ಹಾಲಿ ಕ್ಯಾಪ್ಟನ್ ಕೊಹ್ಲಿ ತಿರುಗೇಟು ನೀಡಿದ್ದು, ಜನರು ತಮ್ಮ ಅನುಕೂಲಕ್ಕೆ ತಕ್ಕಂತೆ ಧೋನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ತಿರುವನಂತಪುರಂ: ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ಟೀಕಾಕಾರರಿಗೆ ಹಾಲಿ ಕ್ಯಾಪ್ಟನ್ ಕೊಹ್ಲಿ ತಿರುಗೇಟು ನೀಡಿದ್ದು, ಜನರು ತಮ್ಮ ಅನುಕೂಲಕ್ಕೆ ತಕ್ಕಂತೆ ಧೋನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ತಮ್ಮದೂ ಸೇರಿದಂತೆ ತಂಡದ ಇತರ ಆಟಗಾರರ ವೈಫಲ್ಯವನ್ನು ನಿರ್ಲಕ್ಷಿಸಿ ಕೇವಲ ಧೋನಿಯನ್ನು ಟೀಕಿಸುತ್ತಿದ್ದಾರೆ ಎಂದು ವಿರಾಟ್ ಕೊಹ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ 2 ನೇ ಟಿ20 ಪಂದ್ಯದಲ್ಲಿ ಭಾರತದ ಸೋಲಿಗೆ ಧೋನಿ ಹೆಚ್ಚು ಡಾಟ್ ಬಾಲ್ ಗಳನ್ನಾಡಿದ್ದೇ ಕಾರಣ ಎಂದು ತಜ್ಞರು ವಿಶ್ಲೇಷಿಸಿದ್ದಾರೆ. 
2 ನೇ ಟಿ20 ಪಂದ್ಯದ ಸೋಲಿನ ಬೆನ್ನಲ್ಲೆ ಪ್ರತಿಕ್ರಿಯೆ ನೀಡಿದ್ದ ವಿವಿಎಸ್ ಲಕ್ಷ್ಮಣ್ ಟಿ20ಯಲ್ಲಿ ಯುವಕರಿಗೆ ಅವಕಾಶ ನೀಡಬೇಕು ಎಂದಿದ್ದರೆ, ಟೀಂ ಮ್ಯಾನೇಜ್ಮೆಂಟ್, ಮಾಜಿ ನಾಯಕ ತಂಡದಲ್ಲಿ ತನ್ನ ಪಾತ್ರವನ್ನು ಅರಿಯುವಂತೆ ಮಾಡಬೇಕು ಎಂದು ವಿರೇಂದ್ರ ಸೆಹ್ವಾಗ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವಿರಾಟ್ ಕೊಹ್ಲಿ, ಜನರು ಧೋನಿಯವರತ್ತ ಏಕೆ ಬೆರಳು ಮಾಡುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನಾನು 3 ಬಾರಿ ಬ್ಯಾಟಿಂಗ್ ವೈಫಲ್ಯ ಎದುರಿಸಿದರೂ ನನ್ನತ್ತ ಯಾರೂ ಬೆರಳು ತೋರುವುದಿಲ್ಲ, ಏಕೆಂದರೆ ನನಗಿನ್ನೂ 35 ಆಗಿಲ್ಲ ಎಂದು ವಿರಾಟ್ ವ್ಯಂಗ್ಯವಾಗಿ ಧೋನಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. 
ಅವರು ಫಿಟ್ ಆಗಿದ್ದಾರೆ, ಎಲ್ಲಾ ಪರೀಕ್ಷೆಗಳನ್ನೂ ಯಶಸ್ವಿಯಾಗಿ ಪೂರೈಸಿದ್ದಾರೆ, ಆನ್ ಫೀಲ್ಡ್ ನಲ್ಲಿ ತಾಂತ್ರಿಕವಾಗಿ ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿದ್ದಾರೆ. ಇನ್ನು ಬ್ಯಾಟಿಂಗ್ ವಿಷಯದಲ್ಲಿ ಆಸ್ಟ್ರೇಲಿಯಾ, ಶ್ರೀಲಂಕಾ ವಿರುದ್ಧ ಅತ್ಯುತ್ತಮವಾದ ಪ್ರದರ್ಶನವನ್ನೇ ನೀಡಿದ್ದಾರೆ ಎಂದು ಕೊಹ್ಲಿ ಹೇಳಿದ್ದಾರೆ. 
’ಧೋನಿ ಬಗ್ಗೆ ಟೀಕೆ ಮಾಡಬೇಕಾದರೆ ಅವರಿಗೆ ಬ್ಯಾಟಿಂಗ್ ನಲ್ಲಿ ಎಷ್ಟು ಸಮಯವಿತ್ತು ಎಂಬುದನ್ನೂ ಗಮನಿಸಬೇಕಾಗುತ್ತದೆ, ಈ ಸರಣಿಯಲ್ಲಿ ಅವರಿಗೆ ಬ್ಯಾಟಿಂಗ್ ಗೆ ಹೆಚ್ಚು ಸಮಯ ಸಿಗಲಿಲ್ಲ, ಅಷ್ಟೇ ಅಲ್ಲದೇ ಬ್ಯಾಟಿಂಗ್ ಮಾಡಲು ಬಂದಾಗ ಅವರು ಎದುರಿಸುವ ಸ್ಥಿತಿಯನ್ನೂ ಗಮನದಲ್ಲಿಡಬೇಕಾಗುತ್ತದೆ, ಹಾರ್ದಿಕ್ ಪಾಂಡ್ಯ ಸಹ ಆ ಪಂದ್ಯದಲ್ಲಿ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ, ಹೀಗಿದ್ದರೂ ಧೋನಿಯತ್ತ ಮಾತ್ರ ಬೆರಳು ತೋರಿಸುವುದೇಕೆ? ಎಂದು ಕೊಹ್ಲಿ ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT