ಕುಲದೀಪ್ ಯಾದವ್ 
ಕ್ರಿಕೆಟ್

ತಂಡಕ್ಕೆ ಆಯ್ಕೆಯಾಗಿಲ್ಲ ಎಂದಾಗ ಬದುಕಬೇಕೆಂದು ಅನಿಸಲಿಲ್ಲ: ಕುಲದೀಪ್ ಯಾದವ್

ಟೀಂ ಇಂಡಿಯಾದ ಯುವ ಸ್ಪಿನ್ನರ್ ಚೀನಾಮನ್ ಖ್ಯಾತಿಯ ಕುಲದೀಪ್ ಯಾದವ್ ಅವರು 15 ವರ್ಷದೊಳಗಿನವರ ಉತ್ತರಪ್ರದೇಶದ ತಂಡದ ಪರ ಆಯ್ಕೆಯಾಗಲಿಲ್ಲ...

ನವದೆಹಲಿ: ಟೀಂ ಇಂಡಿಯಾದ ಯುವ ಸ್ಪಿನ್ನರ್ ಚೀನಾಮನ್ ಖ್ಯಾತಿಯ ಕುಲದೀಪ್ ಯಾದವ್ ಅವರು 15 ವರ್ಷದೊಳಗಿನವರ ಉತ್ತರಪ್ರದೇಶದ ತಂಡದ ಪರ ಆಯ್ಕೆಯಾಗಲಿಲ್ಲ ಎಂಬ ಕಾರಣಕ್ಕೆ 13ನೇ ವಯಸ್ಸಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಹೇಳಿದ್ದಾರೆ. 
ಶಾಲೆಯಲ್ಲಿ ಓದುವಾಗ ನಾನು ಪ್ರಶಂಸನೀಯ ವಿದ್ಯಾರ್ಥಿಯಾಗಿದ್ದೆ. ಆರಂಭದ ದಿನಗಳಲ್ಲಿ ಕ್ರಿಕೆಟ್ ಒಂದು ಮೋಜಿನ ಆಟವೆನಿಸಿತ್ತು. ಆದರೆ ಮುಂದಿನ ದಿನಗಳಲ್ಲಿ ಅದನ್ನೇ ವೃತ್ತಿಯಾಗಿ ತೆಗೆದುಕೊಳ್ಳುತ್ತೇನೆ ಎಂದು ಭಾವಿಸಿರಲಿಲ್ಲ. 13ನೇ ವಯಸ್ಸಿನವನಾಗಿದ್ದಾಗ ನನ್ನನ್ನು ಆಯ್ಕೆಗಾರರು ಆಯ್ಕೆ ಮಾಡಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದೆ ಎಂದು ಕುಲದೀಪ್ ಯಾದವ್ ಹೇಳಿದ್ದಾರೆ. 
ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವುದಕ್ಕೂ ಮುನ್ನ ಕುಲದೀಪ್ ಯಾದವ್ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು. ನಂತರ ತಂಡದಲ್ಲಿ ಆಯ್ಕೆಯಾಗಬೇಕೆಂದು ನಾನು ಕಠಿಣ ಅಭ್ಯಾಸ ನಡೆಸಿದೆ. ಆದರೆ ನಾನು ಆಯ್ಕೆಯಾಗಲಿಲ್ಲ. ಇದರಿಂದಾಗಿ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಕುಲದೀಪ್ ಯಾದವ್ ಅವರು ಹೇಳಿದ್ದಾರೆ. 
ಟೀಂ ಇಂಡಿಯಾ ತಂಡದಲ್ಲಿ ಯಶಸ್ವಿ ಬೌಲರ್ ಆಗಿರುವ ಕುಲದೀಪ್ ಯಾದವ್ ನವೆಂಬರ್ 16ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

SCROLL FOR NEXT