ಟೀಂ ಇಂಡಿಯಾ 
ಕ್ರಿಕೆಟ್

ನಾಗ್ಪುರ ಟೆಸ್ಟ್: ಶ್ರೀಲಂಕಾ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 239 ರನ್‌ಗಳ ಭರ್ಜರಿ ಜಯ

ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀ ಇಂಡಿಯಾ ಇನ್ನಿಂಗ್ಸ್ ಹಾಗೂ 239 ರನ್‌ಗಳಿಂದ ಭರ್ಜರಿ ಜಯ ಗಳಿಸಿದೆ...

ನಾಗ್ಪುರ: ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀ ಇಂಡಿಯಾ ಇನ್ನಿಂಗ್ಸ್ ಹಾಗೂ 239 ರನ್‌ಗಳಿಂದ ಭರ್ಜರಿ ಜಯ ಗಳಿಸಿದೆ. 
ನಾಗ್ಪುರದ ವಿದರ್ಭ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ ಲಂಕಾ ತಂಡವನ್ನು 166 ರನ್‌ಗಳಿಗೆ ಆಲೌಟ್ ಮಾಡಿತ್ತು.  
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಲಂಕಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 205 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ್ದ ಭಾರತ 610 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡು 405 ರನ್ ಮುನ್ನಡೆ ಸಾಧಿಸಿತ್ತು. ನಂತರ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ ಶ್ರೀಲಂಕಾಗೆ ಆರಂಭಿಕ ಆಘಾತ ಎದುರಾಗಿದ್ದು ಎರಡನೇ ಎಸತದಲ್ಲೇ ಸಮರವಿಕ್ರಮಾ ಡಕ್ ಔಟ್ ಆಗಿ ಪೆವಿಲಿಯನ್ ಸೇರಿದರು. ನಾಲ್ಕನೇ ದಿನದಾಟವನ್ನು ಪ್ರಾರಂಭಿಸಿದ ಕರುಣರತ್ನೆ 18 ಹಾಗೂ ತಿರಿಮನ್ನೆ 23 ರನ್ ಗಳಿಸಿ ಔಟಾದರು. 
ನಂತರ ಭಾರತೀಯ ಬೌಲರ್ ಗಳ ಮಾರಕ ದಾಳಿಗೆ ಲಂಕಾ ಆಟಗಾರರು ತರಗೆಲೆಯಂತೆ ಉದುರಿದರು. ಚಾಂಡಿಮಲ್ 61 ಬಿಟ್ಟರೆ ಮತ್ಯಾರಾ ರನ್ ಕಲೆ ಹಾಕುವಲ್ಲಿ ವಿಫಲರಾದರು. 
ಭಾರತ ಪರ ಮೊದಲ ಇನ್ನಿಂಗ್ಸ್ ನಲ್ಲಿ ಕೆಎಲ್ ರಾಹುಲ್ 7, ಮುರಳಿ ವಿಜಯ್ 128, ಚೇತೇಶ್ವರ ಪೂಜಾರ 143, ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 213 ಹಾಗೂ ರೋಹಿತ್ ಶರ್ಮಾ ಅಜೇಯ 102 ರನ್ ಗಳಿಸಿದ್ದಾರೆ. ಲಂಕಾ ಪರ ಬೌಲಿಂಗ್ ನಲ್ಲಿ ಪೆರೆರಾ 3, ಘಮಗೆ, ಹೆರಾತ್, ಶನಕ ತಲಾ 1 ವಿಕೆಟ್ ಪಡೆದಿದ್ದಾರೆ. 
ಲಂಕಾ ಪರ ಲಂಕಾ ಪರ ಮೊದಲ ಇನ್ನಿಂಗ್ಸ್ ನಲ್ಲಿ ಕರುಣರತ್ನೆ 51, ಚಾಂಡಿಮಲ್ 57, ಡಿಕ್ಲೆಲ್ಲಾ 24 ಹಾಗೂ ಪೆರೆರಾ 15 ರನ್ ಗಳಿಸಿ ಔಟಾಗಿದ್ದಾರೆ. ಭಾರತ ಪರ ಆರ್ ಅಶ್ವಿನ್ 4, ಇಶಾಂತ್ ಶರ್ಮಾ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದಿದ್ದಾರೆ. 
ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಕೊಲ್ಕತ್ತಾದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT