ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ, ತಂಡಕ್ಕೆ ಮರಳಿದ ಶಿಖರ್ ಧವನ್

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಭಾರತ..

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಭಾರತ ತಂಡವನ್ನು ಪ್ರಕಟಿಸಿದ್ದು, ಎಡಗೈ ಓಪನರ್ ಶಿಖರ್ ಧವನ್ ತಂಡಕ್ಕೆ ಮರಳಿದ್ದು, ಇವರಿಗೆ ಕನ್ನಡಿಗ ಕೆಎಲ್ ರಾಹುಲ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ.
ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಮತ್ತು ವೇಗಿ ಶಾರ್ದುಲ್ ಠಾಕೂರ್ ಅವರಿಗೂ ಬುಲಾವ್ ನೀಡಲಾಗಿದೆ. ಅದೇ ಹೊತ್ತಿಗೆ ಅನುಭವಿ ಸ್ಪಿನ್ನರ್‌ಗಳಾದ ರವಿಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆಗೆ ಪರಿಗಣಿಸಿಲಾಗಿಲ್ಲ.
ಅಕ್ಟೋಬರ್ 22ರಿಂದ ಅ,29ರವರೆಗೆ ನ್ಯೂಜಿಲೆಂಡ್ ಹಾಗೂ ಭಾರತ ನಡುವೆ ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಅಕ್ಟೋಬರ್ 22ರಂದು ಮೊದಲ ಏಕದಿನ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಅಕ್ಟೋಬರ್ 25 ಪುಣೆ, 29ರಂದು ಕಾನ್ಪುರದಲ್ಲಿ ಉಳಿದೆರೆಡು ಏಕದಿನ ಪಂದ್ಯಗಳು ನಡೆಯಲಿವೆ. ನಂತರ ಮೂರು ಟಿ20 ಪಂದ್ಯಗಳ ಸರಣಿ ನಡೆಯಲಿದೆ. 
ಟೀಂ ಇಂಡಿಯಾ
ವಿರಾಟ್ ಕೋಹ್ಲಿ (ನಾಯಕ)
ರೋಹಿತ್ ಶರ್ಮಾ (ಉಪನಾಯಕ)
ಶಿಖರ್ ಧವನ್
ಅಜಿಂಕ್ಯಾ ರಹಾನೆ
ಮನೀಷ್ ಪಾಂಡೆ
ಕೇದರ್ ಜಾಧವ್
ದಿನೇಶ್ ಕಾರ್ತಿಕ್
ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್)
ಹಾರ್ದಿಕ್ ಪಾಂಡ್ಯ
ಅಕ್ಷರ್ ಪಟೇಲ್
ಕುಲ್‌ದೀಪ್ ಯಾದವ್
ಯಜುವೇಂದ್ರ ಚಹಲ್,
ಜಸ್ಪ್ರೀತ್ ಬುಮ್ರಾ,
ಭುವನೇಶ್ವರ್ ಕುಮಾರ್ ಮತ್ತು
ಶಾರ್ದುಲ್ ಠಾಕೂರ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT