ಎಸ್ ಶ್ರೀಶಾಂತ್ 
ಕ್ರಿಕೆಟ್

ನಾನು ಬೇರೆ ದೇಶದ ಪರವಾಗಿ ಆಡಬಲ್ಲೆ: ಬಿಸಿಸಿಐಗೆ ಶ್ರೀಶಾಂತ್ ಬೆದರಿಕೆ

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯಿಂದ ಆಜೀವ ನಿಷೇಧಕ್ಕೆ ಒಳಗಾಗಿರುವ ಕೇರಳ ವೇಗಿ...

ನವದೆಹಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯಿಂದ ಆಜೀವ ನಿಷೇಧಕ್ಕೆ ಒಳಗಾಗಿರುವ ಕೇರಳ ವೇಗಿ ಎಸ್. ಶ್ರೀಶಾಂತ್ ಅವರು, ತಾನು ಮತ್ತೊಂದು ದೇಶದ ಪರವಾಗಿ ಆಡಬಹುದು ಎಂದು ಹೇಳುವ ಮೂಲಕ ಬಿಸಿಸಿಐಗೆ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಕೇರಳ ಹೈಕೋರ್ಟ್ ವಿಭಾಗೀಯ ಪೀಠ, ಶ್ರೀಶಾಂತ್ ಮೇಲಿನ ಆಜೀವ ನಿಷೇಧ ತೆರವಿಗೆ ತಡೆ ನೀಡಿದ್ದರಿಂದ ಆಕ್ರೋಶಗೊಂಡಿರುವ ವೇಗಿ, ಬಿಸಿಸಿಐ ಮಾತ್ರ ನನಗೆ ನಿಷೇಧ ಹೇರಿದೆ. ಐಸಿಸಿ ಯಾವುದೇ ನಿಷೇಧ ಹೇರಿಲ್ಲ. ಹೀಗಾಗಿ ನಾನು ಬೇರೆ ಯಾವುದೇ ದೇಶದ ಪರ ಆಡುವ ಸ್ವಾತಂತ್ರ್ಯ ಹೊಂದಿರುವುದಾಗಿ ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಶ್ರೀಶಾಂತ್ ಹೇಳಿಕೊಂಡಿದ್ದಾರೆ. 
ಐಸಿಸಿ ಅಲ್ಲ, ಬಿಸಿಸಿಐ ನನ್ನ ಮೇಲೆ ನಿಷೇಧ ಹೇರಿದೆ. ಹಾಗಾಗಿ ಯಾವುದೇ ದೇಶದ ಪರ ನಾನು ಆಡಬಲ್ಲೆ. 34ರ ಹರೆಯದ ನಾನು ಗರಿಷ್ಠ ಆರು ವರ್ಷ ಆಡುವ ಸಾಮರ್ಥ್ಯ ಹೊಂದಿದ್ದೇನೆ. ಓರ್ವ ಕ್ರಿಕೆಟಿಗನಾಗಿ ಕ್ರಿಕೆಟ್ ಆಡಲು ತುಂಬಾ ಇಷ್ಟಪಡುತ್ತೇನೆ. ಎಲ್ಲದರ ಬಳಿಕ ಬಿಸಿಸಿಐ ಒಂದು ಖಾಸಗಿ ಸಂಸ್ಥೆ ಮಾತ್ರ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಿಸಿಸಿಐ ಆಜೀವ ನಿಷೇಧವನ್ನು ಹೈಕೋರ್ಟ್ ಎತ್ತಿ ಹಿಡಿದಾಗಲೇ ಶ್ರೀಶಾಂತ್ ಕ್ರಿಕೆಟ್ ಸಂಸ್ಥೆ ವಿರುದ್ಧ ಕಿಡಿ ಕಾರಿದ್ದರು. ಅಲ್ಲದೆ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ತಾನ ರಾಯಲ್ಸ್ ವಿರುದ್ಧವೇಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT