ಸಂಗ್ರಹ ಚಿತ್ರ 
ಕ್ರಿಕೆಟ್

ಮತ್ತೊಂದು ರಾಷ್ಟ್ರದ ಪರ ಶ್ರೀಶಾಂತ್ ಆಡಲು ಸಾಧ್ಯವಿಲ್ಲ: ಬಿಸಿಸಿಐ

ಕ್ರಿಕೆಟ್ ನಿಂದ ನಿಷೇಧಕ್ಕೆ ಒಳಗಾಗಿರುವ ಶ್ರೀಶಾಂತ್ ಅವರು ಯಾವುದೇ ದೇಶದ ತಂಡವನ್ನೂ ಪ್ರತಿನಿಧಿಸುವಂತಿಲ್ಲ ಎಂದು ಬಿಸಿಸಿಐ ಖಡಕ್ ಪ್ರತಿಕ್ರಿಯೆ ನೀಡಿದೆ.

ಮುಂಬೈ: ಕ್ರಿಕೆಟ್ ನಿಂದ ನಿಷೇಧಕ್ಕೆ ಒಳಗಾಗಿರುವ ಶ್ರೀಶಾಂತ್ ಅವರು ಯಾವುದೇ ದೇಶದ ತಂಡವನ್ನೂ ಪ್ರತಿನಿಧಿಸುವಂತಿಲ್ಲ ಎಂದು ಬಿಸಿಸಿಐ ಖಡಕ್ ಪ್ರತಿಕ್ರಿಯೆ ನೀಡಿದೆ.
ಶ್ರೀಶಾಂತ್ ಅವರ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಆಜೀವ ನಿಷೇಧಕ್ಕೆ ಒಳಗಾಗಿರು ಶ್ರೀಶಾಂತ್ ವಿದೇಶಿ ತಂಡದ ಪರವಾಗಿಯೂ ಕ್ರಿಕೆಟ್ ಆಡುವಂತಿಲ್ಲ ಎಂದು ಹೇಳಿದೆ. ಆ ಮೂಲಕ ವಿದೇಶೀ ತಂಡದ ಪರ  ಆಡುವ ಶ್ರೀಶಾಂತ್ ಕನಸೂ ಭಗ್ನವಾಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿಕೆ ಖನ್ನಾ ಅವರು, ಐಸಿಸಿ ನಿಮಯದ ಪ್ರಕಾರ, ಯಾವುದೇ ಆಟಗಾರನೂ ತನ್ನ ಮಾತೃ ಸಂಸ್ಥೆಯಿಂದ ನಿಷೇಧಕ್ಕೊಳಗಾದರೆ ವಿದೇಶೀ ತಂಡವನ್ನು  ಪ್ರತಿನಿಧಿಸುವ ಅವಕಾಶವಿಲ್ಲ. ಇದು ಶ್ರೀಶಾಂತ್ ಗೂ ಅನ್ವಯವಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
2013ರಲ್ಲಿ ನಡೆದಿದ್ದ ಐಪಿಎಲ್ ಟೂರ್ನಿಯಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪಕ್ಕೆ ತುತ್ತಾಗಿದ್ದ ಕ್ರಿಕೆಟಿಗ ಶ್ರೀಶಾಂತ್ ಮೇಲೆ ಬಿಸಿಸಿಐ ಆಜೀವ ನಿಷೇಧ ಹೇರಿತ್ತು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿ 2015ರಲ್ಲಿ ಪಾಟಿಯಾಲ ಕೋರ್ಟ್  ಶ್ರೀಶಾಂತ್, ಅಂಕಿತ್ ಚೌಹ್ವಾಣ್, ಅಜಿತ್ ಚಾಂಡೀಲಾ ಮೇಲಿನ ನಿಷೇಧವನ್ನು ತೆರವುಗೊಳಿಸಿತ್ತು. ಆದರೆ ಇತ್ತೀಚೆಗೆ ಕೇರಳ ಹೈಕೋರ್ಟ್ ಬಿಸಿಸಿಐ ನಿರ್ಧಾರವನ್ನು ಸಮರ್ಥಿಸಿಕೊಳ್ಳುವುದರೊಂದಿಗೆ ಮತ್ತೆ ದೇಶದ ಪರ ಕ್ರಿಕೆಟ್  ಆಡುವ ಶ್ರೀಶಾಂತ್ ಕನಸು ಭಗ್ನಗೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ