ನ್ಯೂಜಿಲೆಂಡ್ ತಂಡದ ಆಟಗಾರರು 
ಕ್ರಿಕೆಟ್

ಕೇಸರಿ ಶಾಲು ಹೊದಿಸಿ ನ್ಯೂಜಿಲೆಂಡ್-ಭಾರತ ಆಟಗಾರರಿಗೆ ಸ್ವಾಗತ

ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಕಾನ್ಪುರದಲ್ಲಿ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಕಾನ್ಪುರಕ್ಕೆ ಆಗಮಿಸಿದ ಉಭಯ ತಂಡಗಳ ಆಟಗಾರರಿಗೆ

ಕಾನ್ಪುರ್: ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಕಾನ್ಪುರದಲ್ಲಿ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಕಾನ್ಪುರಕ್ಕೆ ಆಗಮಿಸಿದ ಉಭಯ ತಂಡದ ಆಟಗಾರರಿಗೆ ಕೇಸರಿ ಶಾಲು ಹೊದಿಸಿ ಸ್ವಾಗತಿಸಲಾಯಿತು.
ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಮೂರನೇ ಹಾಗೂ ಸರಣಿ ನಿರ್ಣಾಯಕ ಭಾನುವಾರ ಪಂದ್ಯ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕಾನ್ಪುರಕ್ಕೆ ಆಗಮಿಸಿದರು. ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ನಂತರ ಉತ್ತರಪ್ರದೇಶದಲ್ಲಿ ಕೇಸರಿಗೆ ಭಾರೀ ಬೇಡಿಕೆ ಬಂದಿದೆ. 
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೇಸರಿ ಉಡುಪನ್ನು ಧರಿಸುವುದರಿಂದ ಕಾನ್ಪುರಕ್ಕೆ ಆಡಲು ಬಂದ ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ಆಟಗಾರರನ್ನು ಕೇಸರಿ ಶಾಲು ಹೊದಿಸಿ ಸ್ವಾಗತಿಸಲಾಯಿತು. 
ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1 ಪಂದ್ಯಗಳನ್ನು ಗೆಲ್ಲುವ ಮೂಲಕ ಸಮಬಲ ಸಾಧಿಸಿದೆ. ಇನ್ನು ಕಾನ್ಪುರದಲ್ಲಿ ಸರಣಿ ನಿರ್ಣಾಯಕ ಪಂದ್ಯ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಹೆಚ್ಚಿನ ಮಹತ್ವ ಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT