ಚಾಂಪಿಯನ್ ಭಾರತ ತಂಡ 
ಕ್ರಿಕೆಟ್

ಕೊಹ್ಲಿ ಅಬ್ಬರ, ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ

ಕೊನೆಯ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸುವುದರೊಂದಿಗೆ ಭಾರತ ಸರಣಿಯಲ್ಲಿ 5ಕ್ಕೆ 5 ಪಂದ್ಯಗಳನ್ನು ಜಯಿಸಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ಕೊಲಂಬೊ: ಕೊನೆಯ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸುವುದರೊಂದಿಗೆ ಭಾರತ ಸರಣಿಯಲ್ಲಿ 5ಕ್ಕೆ 5 ಪಂದ್ಯಗಳನ್ನು ಜಯಿಸಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಪ್ರಾರಂಭಿಸಿದ ಶ್ರೀಲಂಕಾ 239 ರನ್‌ಗಳ ಗುರಿ ನೀಡಿತು. ಆ ಗುರಿಯನ್ನು ಬೆನ್ನತ್ತಿದ ಟೀಮ್‌ ಇಂಡಿಯಾ ಆರಂಭಿಕ ಆಘಾತದ ನಡುವೆಯೂ ಭರ್ಜರಿ ಆಟವಾಡಿ 46. 3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 239 ರನ್‌ ಗಳಿಸಿತು.

ಅಜೇಯ 110 ರನ್‌ ಗಳಿಸಿದ ವಿರಾಟ್‌ ಕೋಹ್ಲಿ ತಂದವನ್ನುವಿಜಯಿಯಾಗಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಇದು ಕೋಹ್ಲಿ ವೃತ್ತಿ ಬದುಕಿನ 30ನೇ ಶತಕವಾಗಿದೆ.

ಇದಕ್ಕೂ ಮುನ್ನ ಭಾರತ ತಂಡದ ನಿರಂತರ ಬೌಲಿಂಗ್‌ ದಾಳಿಗೆ ಕುಸಿದ ಆತಿಥೇಯ ಶ್ರೀಲಂಕಾ ತಂಡ ಐದನೇ ಏಕದಿನ ಪಂದ್ಯದಲ್ಲಿ 238 ರನ್‌ ಗಳಿಸಲಷ್ಟೇ ಯಶಸ್ವಿಯಾಗಿತ್ತು.

ಪಂದ್ಯದಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಭುವನೇಶ್ವರ ಕುಮಾರ್ ಪಂದ್ಯ ಪುರುಷೋತ್ತಮ ಆದರೆ ಜಸ್ಪ್ರಿತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇದೇ ಪಂದ್ಯದಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಈ ಪಂದ್ಯದಲ್ಲಿ 100ನೇ ಸ್ಟಂಪಿಂಗ್‌ ಮಾಡುವ ಮೂಲಕ ದಾಖಲೆ ಬರೆದರು.




Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT