ಚಾಂಪಿಯನ್ ಭಾರತ ತಂಡ 
ಕ್ರಿಕೆಟ್

ಕೊಹ್ಲಿ ಅಬ್ಬರ, ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ

ಕೊನೆಯ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸುವುದರೊಂದಿಗೆ ಭಾರತ ಸರಣಿಯಲ್ಲಿ 5ಕ್ಕೆ 5 ಪಂದ್ಯಗಳನ್ನು ಜಯಿಸಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ಕೊಲಂಬೊ: ಕೊನೆಯ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸುವುದರೊಂದಿಗೆ ಭಾರತ ಸರಣಿಯಲ್ಲಿ 5ಕ್ಕೆ 5 ಪಂದ್ಯಗಳನ್ನು ಜಯಿಸಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಪ್ರಾರಂಭಿಸಿದ ಶ್ರೀಲಂಕಾ 239 ರನ್‌ಗಳ ಗುರಿ ನೀಡಿತು. ಆ ಗುರಿಯನ್ನು ಬೆನ್ನತ್ತಿದ ಟೀಮ್‌ ಇಂಡಿಯಾ ಆರಂಭಿಕ ಆಘಾತದ ನಡುವೆಯೂ ಭರ್ಜರಿ ಆಟವಾಡಿ 46. 3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 239 ರನ್‌ ಗಳಿಸಿತು.

ಅಜೇಯ 110 ರನ್‌ ಗಳಿಸಿದ ವಿರಾಟ್‌ ಕೋಹ್ಲಿ ತಂದವನ್ನುವಿಜಯಿಯಾಗಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಇದು ಕೋಹ್ಲಿ ವೃತ್ತಿ ಬದುಕಿನ 30ನೇ ಶತಕವಾಗಿದೆ.

ಇದಕ್ಕೂ ಮುನ್ನ ಭಾರತ ತಂಡದ ನಿರಂತರ ಬೌಲಿಂಗ್‌ ದಾಳಿಗೆ ಕುಸಿದ ಆತಿಥೇಯ ಶ್ರೀಲಂಕಾ ತಂಡ ಐದನೇ ಏಕದಿನ ಪಂದ್ಯದಲ್ಲಿ 238 ರನ್‌ ಗಳಿಸಲಷ್ಟೇ ಯಶಸ್ವಿಯಾಗಿತ್ತು.

ಪಂದ್ಯದಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಭುವನೇಶ್ವರ ಕುಮಾರ್ ಪಂದ್ಯ ಪುರುಷೋತ್ತಮ ಆದರೆ ಜಸ್ಪ್ರಿತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇದೇ ಪಂದ್ಯದಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಈ ಪಂದ್ಯದಲ್ಲಿ 100ನೇ ಸ್ಟಂಪಿಂಗ್‌ ಮಾಡುವ ಮೂಲಕ ದಾಖಲೆ ಬರೆದರು.




Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT