ಲಸಿತ್ ಮಲಿಂಗಾ 
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯದ ಸುಳಿವು ನೀಡಿದ ಲಸಿತ್ ಮಲಿಂಗಾ

ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಶ್ರೀಲಂಕಾದ ಯಾರ್ಕರ್ ಸ್ಪೆಷಲಿಸ್ಟ್ ಲಸಿತ್ ಮಲಿಂಗಾ ಕಳಪೆ ಪ್ರದರ್ಶನ ನೀಡಿದ್ದರಿಂದ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸುವ ಸುಳಿವು ನೀಡಿದ್ದಾರೆ...

ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಶ್ರೀಲಂಕಾದ ಯಾರ್ಕರ್ ಸ್ಪೆಷಲಿಸ್ಟ್ ಲಸಿತ್ ಮಲಿಂಗಾ ಕಳಪೆ ಪ್ರದರ್ಶನ ನೀಡಿದ್ದರಿಂದ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸುವ ಸುಳಿವು ನೀಡಿದ್ದಾರೆ. 
ಕಾಲಿನ ಗಾಯದ ಸಮಸ್ಯೆಯಿಂದ 19 ತಿಂಗಳ ನಂತರ ತಂಡಕ್ಕೆ ಮರಳಿದ್ದ ಲಸಿತ್ ಮಲಿಂಗಾ ಭಾರತ ವಿರುದ್ಧದ 4 ಏಕದಿನ ಪಂದ್ಯಗಳ ಪೈಕಿ ಬರೀ ಎರಡು ವಿಕೆಟ್ ಮಾತ್ರ ಪಡೆಯಲು ಸಫಲರಾಗಿದ್ದು ತಂಡದಲ್ಲಿ ಅವರ ಪಾತ್ರದ ಕುರಿತು ಪ್ರಶ್ನೆಗಳು ಎದ್ದಿವೆ. ಕಳಪೆ ಪ್ರದರ್ಶನ ನೀಡುತ್ತಿರುವುದರಿಂದ ಸ್ವತಃ ಮಲಿಂಗಾ ಅವರೇ ಹಿಂದಿನ ಜಿಂಬಾಬ್ವೆ ಮತ್ತು ಭಾರತ ವಿರುದ್ಧದ ಸರಣಿಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ಕುರಿತು ನೋವು ವ್ಯಕ್ತಪಡಿಸಿದ್ದಾರೆ. 
ಗಾಯ ಸಮಸ್ಯೆಯಿಂದಾಗಿ ನಾನು 19 ತಿಂಗಳ ನಂತರ ತಂಡಕ್ಕೆ ಮರಳಿದ್ದೇನೆ. ಆದರೆ ಎರಡು ತಂಡಗಳ ವಿರುದ್ಧ ನಾನು ಉತ್ತಮ ಪ್ರದರ್ಶನ ನೀಡಲಿಲ್ಲ. ನಾನು ಈ ಸರಣಿಯ ನಂತರ ಎಲ್ಲಿದ್ದೇನೆಂದು ನೋಡುತ್ತೇನೆ. ಜತೆಗೆ ನನ್ನ ದೇಹವು ಎಷ್ಟು ಸಮಯದವರೆಗೆ ನನಗೆ ಆಡಲು ಸಹಕರಿಸುತ್ತದೆ ಎಂಬುದನ್ನು ಮೌಲ್ಯಮಾಪನ ಮಾಡಿ ನೋಡುತ್ತೇನೆ ಎಂದು ಹೇಳಿದ್ದಾರೆ. 
ನಾನು ಅನುಭವಿ ಆಟಗಾರ ಎಂಬುದು ಇಲ್ಲಿ ಮುಖ್ಯವಲ್ಲ, ತಂಡಕ್ಕಾಗಿ ನಾನು ಪಂದ್ಯವನ್ನು ಗೆಲ್ಲಿಸಲು ಸಾಧ್ಯವಾಗದಿದ್ದ ಪಕ್ಷದಲ್ಲಿ ತಂಡದಲ್ಲಿ ನನ್ನ ಅಗತ್ಯವೆನಿದೆ. ಮುಂದೆ ನನಗೆ ಎಷ್ಟು ಪಂದ್ಯಗಳಲ್ಲಿ ಆಡುವ ಅವಕಾಶ ಸಿಗುತ್ತದೆ ನೋಡುತ್ತೇನೆ. ಆ ಪಂದ್ಯಗಳಲ್ಲಿ ನನ್ನ ಶರೀರ ನನಗೆ ಎಷ್ಟು ಸಹಕರಿಸುತ್ತದೆ ಎಂದು ಪರೀಕ್ಷಿಸುತ್ತೇನೆ. ಒಂದು ವೇಳೆ ನಾನು ದಣಿದಿದ್ದೇನೆ ಎಂಬುದು ಮನದಟ್ಟಾದರೆ, ಖುಷಿಯಾಗಿ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸುತ್ತೇನೆ ಎಂದು ಲಸಿತ್ ಮಲಿಂಗಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT