ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ - ಕುಲದೀಪ್ ಯಾದವ್ 
ಕ್ರಿಕೆಟ್

5ನೇ ಏಕದಿನ ಪಂದ್ಯ: ಶ್ರೀಲಂಕಾ 238ಕ್ಕೆ ಆಲೌಟ್

ಐದನೇ ಹಾಗೂ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿರುವ....

ಕೊಲಂಬೊ: ಐದನೇ ಹಾಗೂ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿರುವ ಟೀಂ ಇಂಡಿಯಾ ಆತಿಥೇಯ ಶ್ರಿಲಂಕಾವನ್ನು 238ಕ್ಕೆ ಆಲೌಟ್ ಮಾಡಿದೆ. 
ಆರ್‌ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆ‌ಯುತ್ತಿರುವ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ‌ಮಾಡಿಕೊಂಡ ಲಂಕಾ ಆರಂಭಿಕ ಆಘಾತ ಅನುಭವಿಸಿ ನಂತರ ಮಧ್ಯಮ ಕ್ರಮಾಂಕದಲ್ಲಿ ಚೇತರಿಸಿಕೊಂಡರೂ ಕೊನೆ ಕ್ಷಣದಲ್ಲಿ ಮತ್ತೆ ಕುಸಿದು 49.4 ಓವರ್ ನಲ್ಲಿ ಕೇವಲ 238ರನ್ ಗಳಿಸಿ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು.
ಭಾರತದ ಪರ ಭುವನೇಶ್ವರ್‌ ಕುಮಾರ್‌ 5, ಜಸ್‌ಪ್ರೀತ್ ಬೂಮ್ರಾ 2, ಕುಲದೀಪ್‌ ಯಾದವ್‌ 1, ಯಜುವೇಂದ್ರ ಚಾಹಲ್‌ 1 ವಿಕೆಟ್‌ ಪಡೆದಿದ್ದಾರೆ.
ಇನ್ನು ಶ್ರೀಲಂಕಾ ಪರ ತಿರಿಮನೆ 67, ಏಂಜೆಲೊ ಮ್ಯಾಥ್ಯೂಸ್ 55, ತರಂಗಾ 48 ರನ್ ಗಳಿಸಿದ್ದು ಬಿಟ್ಟರೆ ಉಳಿದವರು ಹೆತ್ತು ಹೊತ್ತು ಕ್ರೀಸ್ ನಲ್ಲಿ ಉಳಿಯಲಿಲ್ಲ. 
ಐದು ಪಂದ್ಯಗಳ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಲ್ಕು ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ಇನ್ನು ಅಂತಿಮ ಪಂದ್ಯದಲ್ಲಿ ಗೆದ್ದು ಲಂಕಾ ತಂಡವನ್ನು ವೈಟ್ ವಾಷ್ ಮಾಡಲು ಟೀಂ ಇಂಡಿಯಾ ಯೋಜನೆ ರೂಪಿಸಿದೆ. ಇನ್ನು ಅಂತಿಮ ಪಂದ್ಯದಲ್ಲಾದರೂ ಗೆದ್ದು ಮರ್ಯಾದೆ ಉಳಿಸಿಕೊಳ್ಳುವ ಒತ್ತಡದಲ್ಲಿ ಲಂಕಾ ತಂಡ ಸಿದ್ಧತೆ ನಡೆಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

45 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ: ಕರ್ನಾಟಕದ 3 ಸಾಧಕರಿಗೆ ಗೌರವ

ಮೈಸೂರು: ಕೌಟುಂಬಿಕ ಕಲಹ, ಇಬ್ಬರು ಮಕ್ಕಳೊಂದಿಗೆ ತಾಯಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಮೈಸೂರಿನ ಮಾಜಿ ಬಸ್ ಕಂಡಕ್ಟರ್, ಪುಸ್ತಕ ಪ್ರೇಮಿ ಅಂಕೇಗೌಡಗೆ 'ಪದ್ಮಶ್ರೀ' ಪ್ರಶಸ್ತಿ!

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ

CCL 2026: ಭೋಜ್‌ಪುರಿ ದಬಾಂಗ್ಸ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ಗೆ 18 ರನ್‌ಗಳ ರೋಚಕ ಜಯ, ಸೆಮಿಫೈನಲ್‌ಗೆ ಎಂಟ್ರಿ!

SCROLL FOR NEXT