ಹ್ಯಾಟ್ರಿಕ್ ವಿಕೆಟ್ ಪಡೆದ ಕುಲದೀಪ್ ಯಾದವ್ 
ಕ್ರಿಕೆಟ್

ಹ್ಯಾಟ್ರಿಕ್ ವಿಕೆಟ್ ಮೂಲಕ ಐತಿಹಾಸಿಕ ಸಾಧನೆಗೈದ ಕುಲದೀಪ್ ಯಾದವ್!

ಈಡನ್ ಗಾರ್ಡನ್ ನಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆದು ಆಸಿಸ್ ಸೋಲಿಗೆ ಕಾರಣರಾದ ಕುಲದೀಪ್ ಯಾದವ್ ಇದೀಗ ಐತಿಹಾಸಿಕ ಸಾಧನೆಗೆ ಪಾತ್ರರಾಗಿದ್ದಾರೆ.

ಕೋಲ್ಕತಾ: ಈಡನ್ ಗಾರ್ಡನ್ ನಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆದು ಆಸಿಸ್ ಸೋಲಿಗೆ ಕಾರಣರಾದ ಕುಲದೀಪ್ ಯಾದವ್ ಇದೀಗ ಐತಿಹಾಸಿಕ ಸಾಧನೆಗೆ ಪಾತ್ರರಾಗಿದ್ದಾರೆ.
ಚೈನಾಮ್ಯಾನ್ ಖ್ಯಾತಿಯ ಕುಲ್‌ದೀಪ್ ಯಾದವ್ ಹ್ಯಾಟ್ರಿಕ್ ವಿಕೆಟ್ (54/3) ಸಾಧನೆಯ ನೆರವಿನಿಂದ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ 50 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ.  ಆ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಮೊದಲ ಭಾರತೀಯ ಸ್ಪಿನ್ನರ್ ಎಂಬ ಕೀರ್ತಿಗೆ ಕುಲದೀಪ್ ಯಾದವ್ ಭಾಜನರಾಗಿದ್ದು, ಒಟ್ಟಾರೆ ಹ್ಯಾಟ್ರಿಕ್ ವಿಕೆಟ್ ಪಡೆದ ಮೂರನೇ ಭಾರತೀಯ ಆಟಗಾರ ಎಂಬ  ಕೀರ್ತಿಗೆ ಭಾಜನರಾಗಿದ್ದಾರೆ.

ಇದಕ್ಕೂ ಮೊದಲ 1987ರಲ್ಲಿ ನಾಗಪುರದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತದ ಚೇತನ್ ಶರ್ಮಾ ಹ್ಯಾಟ್ರಿಕ್ ವಿಕೆಟ್ ಸಾಧನೆಗೈದು, ಮೊದಲ ಭಾರತೀಯ ಎಂಬ ಕೀರ್ತಿಗೆ ಭಾಜನರಾಗಿದ್ದರು. ಬಳಿಕ 1991ರಲ್ಲಿ  ಕೋಲ್ಕತಾದಲ್ಲಿ ನಡೆದ ಪಂದ್ಯದಲ್ಲಿ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಈ ಸಾಧನೆ ಗೈದಿದ್ದರು. ಬಳಿಕ ಸುಮಾರು 26 ವರ್ಷಗಳ ಬಳಿಕ ಕುಲದೀಪ್ ಯಾದವ್ ಬಲಿಷ್ಟ ಆಸ್ಚ್ರೇಲಿಯಾ ವಿರುದ್ಧ ಈ ಸಾಧನೆ ಗೈದಿದ್ದಾರೆ. ಕುಲದೀಪ್  ಏಕದಿನದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ್ದು ಗಮನಾರ್ಹವಾಗಿದ್ದು, ಏಕದಿನ ಕ್ರಿಕೆಟ್ ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಮೊದಲ ಭಾರತೀಯ ಸ್ಪಿನ್ನರ್ ಎಂಬ ಕೀರ್ತಿಗೆ ಕುಲದೀಪ್ ಭಾಜನರಾಗಿದ್ದಾರೆ.

ಒಂದು ಹಂತದಲ್ಲಿ ಪಂದ್ಯ ಭಾರತದ ಕೈತಪ್ಪುವ ಅಪಾಯದಲ್ಲಿತ್ತು. ಪಂದ್ಯದ 33ನೇ ಓವರ್ ನ 2ನೇ ಎಸೆತದಲ್ಲಿ ವೇಡ್ ರನ್ನು ಬೋಲ್ಜ್ ಮಾಡಿದರು. ಬಳಿಕ ಕ್ರೀಸ್ ಗೆ ಆಗಮಿಸಿದ ಅಗರ್ ಎಲ್ ಬಿ ಬಲೆಗೆ ಬಿದ್ದರೆ, ಮೂರನೇ ವಿಕೆಟ್  ರೂಪದದಲ್ಲಿ ಕ್ಯಮಿನ್ಸ್ ಬಲಿಯಾದರು. ಕುಲದೀಪ್ ಗೆ ಹ್ಯಾಟ್ರಿಕ್ ನೀಡಬಾರದು ಎಂಬ ಉದ್ದೇಶದಿಂದ ಕ್ಯುಮಿನ್ಸ್ ರಕ್ಷಣಾತ್ಮಕವಾಗಿ ಆಡಲು ಯತ್ನಿಸಿದರಾದರೂ ಕುಲದೀಪ್ ಎಸೆದ ಚೆಂಡು ಕ್ಯುಮಿನ್ಸ್ ಬ್ಯಾಟ್ ನ ಅಂಚಿಗೆ ಸವರಿ ನೇರ  ಧೋನಿ ಕೈ ಸೇರಿತ್ತು. ಆ ಮೂಲಕ ಕುಲದೀಪ್ ಏಕದಿನ ಕ್ರಿಕೆಟ್ ನಲ್ಲಿ ಹ್ಯಾಟ್ರಿಕ್ ಸಾಧನೆ ಗೈದ ಮೊದಲ ಭಾರತೀಯ ಆಟಗಾರ ಎಂಬ ಕೀರ್ತಿಗೆ ಭಾಜನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT