ಶಾಹಿದ್ ಅಫ್ರಿದಿ 
ಕ್ರಿಕೆಟ್

ಭಾರತ ಆಕ್ರಮಿತ ಕಾಶ್ಮೀರದಲ್ಲಿ ಅಮಾಯಕರು ಸಾಯುತ್ತಿದ್ದಾರೆ: ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಟ್ವೀಟ್

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹೀದ್‌ ಆಫ್ರಿದಿ ಮತ್ತೆ ಕಾಶ್ಮೀರ ವಿಚಾರವನ್ನು ಕೆದಕಿದ್ದಾರೆ. ಕಾಶ್ಮೀರವನ್ನು ಭಾರತ ಆಕ್ರಮಿತ ಕಾಶ್ಮೀರ ಎಂದೆನ್ನುವ ಮೂಲಕ ಮತ್ತೆ ಉದ್ದಟತನ ತೋರಿದ್ದಾರೆ.

ನವದೆಹಲಿ: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹೀದ್‌ ಆಫ್ರಿದಿ ಮತ್ತೆ ಕಾಶ್ಮೀರ ವಿಚಾರವನ್ನು ಕೆದಕಿದ್ದಾರೆ. ಕಾಶ್ಮೀರವನ್ನು ಭಾರತ ಆಕ್ರಮಿತ ಕಾಶ್ಮೀರ ಎಂದೆನ್ನುವ ಮೂಲಕ ಮತ್ತೆ ಉದ್ದಟತನ ತೋರಿದ್ದಾರೆ. 
ಕಾಶ್ಮೀರ ವಿಚಾರವಾಗಿ ಆಫ್ರಿದಿ  ಟ್ವೀಟ್ ಮಾಡಿದ್ದು ಕಾಶ್ಮೀರೀ ಜನರ ಸ್ವಾತಂತ್ರ್ಯ ಮತ್ತು ಸ್ವಯಂ ಆಡಳಿತೆಕ್ಕಾಗಿ ಬೆಂಬಲ ಸೂಚಿಸಿ ಎಂದಿದ್ದಾರೆ. ಭಾರತೀಯ ಸೈನಿಕರಿಂದ ಕಾಶ್ಮೀರ ಕಣಿವೆಯಲ್ಲಿ ರಕ್ತಪಾತವಾಗುತ್ತಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ ತಡೆಯುವಲ್ಲಿ ವಿಶ್ವಸಂಸ್ಥೆ ವಿಫಲವಾಗಿದೆ. ಭಾರತ ಆಕ್ರಮಿತ ಕಾಶ್ಮೀರದಲ್ಲಿ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. ಸ್ವಾತಂತ್ರ್ಯಕ್ಕಾಗಿ ದನಿ ಎತ್ತುತ್ತಿರುವ ಅಮಾಯಕರ ಬಲಿಯಾಗುತ್ತಿದೆ. ಆದರೆ ಇಂತಹಾ ಪರಿಸ್ಥಿತಿಯನ್ನು ನಿಯಂತ್ರಿಸಬೇಕಾದ ವಿಶ್ವಸಂಥೆ ಹಾಗೂ ಇತರೆ ಅಂತರಾಷ್ಟ್ರೀಯ ಸಂಸ್ಥೆಗಳು ಮಾತ್ರ ಎಲ್ಲಿದೆ ಎನ್ನುವುದು ತಿಳಿಯುತ್ತಿಲ್ಲ. ಟ್ವೀಟ್ ನಲ್ಲಿ ಕ್ರಿಕೆಟಿಗ ಹೇಳಿದ್ದಾರೆ.
ಏ.1ರಂದು ಕಾಶ್ಮೀರದಲ್ಲಿ ನಡೆದ ಹಿಂಸಾಚರದಲ್ಲಿ 13 ಉಗ್ರರು ಸೇರಿದಂತೆ 20 ಮಂದಿ ಸಾವನ್ನಪ್ಪಿದ್ದ ಘಟನೆ ಬೆನ್ನಲ್ಲಿ ಆಫ್ರಿದಿ ಈ ಟ್ವೀಟ್ ಮಾಡಿದ್ದಾರೆ.
ಆಫ್ರಿದಿ ಅವರ ಈ ಟ್ವಿಟ್ ಗೆ ಭಾರತೀಯರಿಂದ ಖಾರದ ಪ್ರತಿಕ್ರಿಯೆಗಳು ಬಂದಿದ್ದರೆ ಪಾಕಿಸ್ಥಾನೀಯರಿಂದ ಬೆಂಬಲ ವ್ಯಕ್ತವಾಗಿದೆ.
ಮಾಜಿ ಕ್ರಿಕೆಟಿಗ ಈ ಹಿಂದೆ ಸಹ ಕಾಶ್ಮೀರ ವಿಚಾರವನ್ನು ಕೆಣಕುವಂತೆ ಟ್ವೀಟ್ ಮಾಡಿದ್ದರು. 2016ರ ಮಾರ್ಚ್‌ರಲ್ಲಿ ಮೊಹಾಲಿಯಲ್ಲಿ ಆಸೀಸ್‌ ವಿರುದ್ದದ ಟಿ20 ಪಂದ್ಯ ನಡೆದ ವೇಳೆ  "ಪಾಕ್‌ ತಂಡವನ್ನು ಬೆಂಬಲಿಸಿದ ಕಾಶ್ಮೀರೀ ಅಭಿಮಾನಿಗಳಿಗೆ ಧನ್ಯವಾದಗಳು' ಎಂದು ಟ್ವಿಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚುನಾವಣೆಗೂ ಮುನ್ನ ಯೋಗಿ ಸರ್ಕಾರದಲ್ಲಿ ಮಹತ್ತರ ಬದಲಾವಣೆ: ಸಂಪುಟ ಪುನಾರಚನೆ; 6 ಹೊಸ ಸಚಿವರ ಸೇರ್ಪಡೆ

IPL 2026: ನಿರ್ಣಾಯಕ ಪಂದ್ಯದಲ್ಲಿ ಲಖನೌ ವಿರುದ್ಧ ಗೆದ್ದ CSK; ಪ್ಲೇ ಆಫ್ ಕನಸು ಜೀವಂತ!

IPL 2026, RCB vs MI: MS Dhoni ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಜೋಡಿ

ಕೇರಳ ಸಿಎಂ ಆಯ್ಕೆ: ಕೆಸಿ ವೇಣುಗೋಪಾಲ್ ರಾಹುಲ್ ಗಾಂಧಿಯ ಆದ್ಯತೆ; ಕುತೂಹಲ ಮೂಡಿಸಿದ ಖಾಸಗಿ ಭೇಟಿ!

Tamil Nadu: 'ಡಿಎಂಕೆ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ': ಇಚ್ಛಾಶಕ್ತಿ ಬೇಕು ಎಂದ Stalin ಗೆ ಶಾಕ್ ಕೊಟ್ಟ ಸಿಎಂ ವಿಜಯ್

SCROLL FOR NEXT