ಸಂಗ್ರಹ ಚಿತ್ರ 
ಕ್ರಿಕೆಟ್

ಐಪಿಎಲ್ 2018: ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಗೆ 7 ವಿಕೆಟ್ ಗಳ ಭರ್ಜರಿ ಜಯ

ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.

ಜೈಪುರ: ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.
ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ನೀಡಿದ 161 ರನ್ ಗಳ ಗುರಿಯನ್ನು ಕೋಲ್ಕತಾ ತಂಡ ಕೇವಲ 18.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ಸಾಧಿಸಿತು. ಪ್ರಮುಖವಾಗಿ ಕೋಲ್ಕತಾ ಕೇವಲ 1 ರನ್ ಗೆ ಆರಂಭಿಕ ಆಟಗಾರ ಕ್ರಿಸ್ ಲಿನ್ ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತ ಎದುರಿಸಿತಾದರೂ ಮತ್ತೋರ್ವ ಆರಂಭಿಕ ಆಟಗಾರ ಸುನಿಲ್ ನರೇನ್ ಅವರ ಸಮಯೋಚಿತ ಆಟದಿಂದ ಆರಂಭಿಕ ಆಘಾತದಿಂದ ಚೇತರಿಸಿಕೊಂಡಿತು. ಬಳಿಕ 35 ರನ್ ಗಳಿಸಿದ್ದ ನರೇನ್ ರನೌಟ್ ಆಗುತ್ತಿದ್ದಂತೆಯೇ ಮತ್ತೆ ಕೋಲ್ಕತಾ ಪಾಳಯದಲ್ಲಿ ಆತಂಕ ಎದುರಾಯಿತು.
ಆದರೆ ಈ ಹಂತದಲ್ಲಿ ಬ್ಯಾಟಿಂಗ್ ಗೆ ಇಳಿದಿದ್ದ ರಾಬಿನ್ ಉತ್ತಪ್ಪ ಭರ್ಜರಿ ಆಟವಾಡಿದರು. 6 ಬೌಂಡರಿ ಮತ್ತು 2 ಸಿಕ್ಸರ್ ಮೂಲಕ 48 ರನ್ ಗಳಿಸಿದ್ದ ಉತ್ತಪ್ಪ ಕೇವಲ 2 ರನ್ ಗಳ ಅಂತರದಲ್ಲಿ ತಮ್ಮ ಅರ್ಧಶತಕ ಮಿಸ್ ಮಾಡಿಕೊಂಡರು. ಬಳಿಕ ಜೊತೆ ಗೂಡಿದ ನಿತೀಶ್ ರಾಣಾ (ಅಜೇಯ 35 ರನ್ ) ಮತ್ತು ನಾಯಕ ದಿನೇಶ್ ಕಾರ್ತಿಕ್ (ಅಜೇಯ 42 ರನ್ ) ಉತ್ತಮ ಬ್ಯಾಟಿಂಗ್ ಮೂಲಕ ತಂಡವನ್ನು ಗೆಲುವಿನ ಗಡಿ ದಾಟಿಸಿದರು. ಇನ್ನು ರಾಜಸ್ಥಾನದ ಪರ ಕೆ ಗೌತಮ್ 2 ವಿಕೆಟ್ ಗಳಿಸಿದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ನಡೆಸಿದ ರಾಜಸ್ಥಾನ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು. ನಾಯಕ ಅಜಿಂಕ್ಯಾ ರಹಾನೆ ಮತ್ತು ಆರ್ಕಿ ಶಾರ್ಟ್ ಉತ್ತಮ ಆರಂಭದ ಹೊರತಾಗಿಯೂ ಮಧ್ಯಮ ಕ್ರಮಾಂಕದ ವಿಫಲತೆಯಿಂದಾಗಿ ರಾಜಸ್ಥಾನ ತಂಡ ಬೃಹತ್ ಮೊತ್ತ ಪೇರಿಸುವಲ್ಲಿ ವಿಫಲವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT