ಸಂಗ್ರಹ ಚಿತ್ರ 
ಕ್ರಿಕೆಟ್

ಐಪಿಎಲ್ 2018: ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಗೆ 7 ವಿಕೆಟ್ ಗಳ ಭರ್ಜರಿ ಜಯ

ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.

ಜೈಪುರ: ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.
ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ನೀಡಿದ 161 ರನ್ ಗಳ ಗುರಿಯನ್ನು ಕೋಲ್ಕತಾ ತಂಡ ಕೇವಲ 18.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ಸಾಧಿಸಿತು. ಪ್ರಮುಖವಾಗಿ ಕೋಲ್ಕತಾ ಕೇವಲ 1 ರನ್ ಗೆ ಆರಂಭಿಕ ಆಟಗಾರ ಕ್ರಿಸ್ ಲಿನ್ ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತ ಎದುರಿಸಿತಾದರೂ ಮತ್ತೋರ್ವ ಆರಂಭಿಕ ಆಟಗಾರ ಸುನಿಲ್ ನರೇನ್ ಅವರ ಸಮಯೋಚಿತ ಆಟದಿಂದ ಆರಂಭಿಕ ಆಘಾತದಿಂದ ಚೇತರಿಸಿಕೊಂಡಿತು. ಬಳಿಕ 35 ರನ್ ಗಳಿಸಿದ್ದ ನರೇನ್ ರನೌಟ್ ಆಗುತ್ತಿದ್ದಂತೆಯೇ ಮತ್ತೆ ಕೋಲ್ಕತಾ ಪಾಳಯದಲ್ಲಿ ಆತಂಕ ಎದುರಾಯಿತು.
ಆದರೆ ಈ ಹಂತದಲ್ಲಿ ಬ್ಯಾಟಿಂಗ್ ಗೆ ಇಳಿದಿದ್ದ ರಾಬಿನ್ ಉತ್ತಪ್ಪ ಭರ್ಜರಿ ಆಟವಾಡಿದರು. 6 ಬೌಂಡರಿ ಮತ್ತು 2 ಸಿಕ್ಸರ್ ಮೂಲಕ 48 ರನ್ ಗಳಿಸಿದ್ದ ಉತ್ತಪ್ಪ ಕೇವಲ 2 ರನ್ ಗಳ ಅಂತರದಲ್ಲಿ ತಮ್ಮ ಅರ್ಧಶತಕ ಮಿಸ್ ಮಾಡಿಕೊಂಡರು. ಬಳಿಕ ಜೊತೆ ಗೂಡಿದ ನಿತೀಶ್ ರಾಣಾ (ಅಜೇಯ 35 ರನ್ ) ಮತ್ತು ನಾಯಕ ದಿನೇಶ್ ಕಾರ್ತಿಕ್ (ಅಜೇಯ 42 ರನ್ ) ಉತ್ತಮ ಬ್ಯಾಟಿಂಗ್ ಮೂಲಕ ತಂಡವನ್ನು ಗೆಲುವಿನ ಗಡಿ ದಾಟಿಸಿದರು. ಇನ್ನು ರಾಜಸ್ಥಾನದ ಪರ ಕೆ ಗೌತಮ್ 2 ವಿಕೆಟ್ ಗಳಿಸಿದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ನಡೆಸಿದ ರಾಜಸ್ಥಾನ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು. ನಾಯಕ ಅಜಿಂಕ್ಯಾ ರಹಾನೆ ಮತ್ತು ಆರ್ಕಿ ಶಾರ್ಟ್ ಉತ್ತಮ ಆರಂಭದ ಹೊರತಾಗಿಯೂ ಮಧ್ಯಮ ಕ್ರಮಾಂಕದ ವಿಫಲತೆಯಿಂದಾಗಿ ರಾಜಸ್ಥಾನ ತಂಡ ಬೃಹತ್ ಮೊತ್ತ ಪೇರಿಸುವಲ್ಲಿ ವಿಫಲವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT