ವಿರಾಟ್ ಕೊಹ್ಲಿ 
ಕ್ರಿಕೆಟ್

ಡಿಆರ್‌ಎಸ್‌ನಲ್ಲಿ ಹಾರ್ದಿಕ್ ಪಾಂಡ್ಯ ನಾಟೌಟ್ ತೀರ್ಪು; ವಿರಾಟ್ ಕೊಹ್ಲಿ ದಿಗ್ಬ್ರಾಂತಿ!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಇದೇ ಮೊದಲ ಬಾರಿಗೆ ಅಂಪೈರ್ ಮೇಲ್ಮನವಿ ಪರಾಮರ್ಶೆ(ಡಿಆರ್‌ಎಸ್) ಅನ್ನು ಅಳವಡಿಸಿಕೊಂಡಿದ್ದು...

ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಇದೇ ಮೊದಲ ಬಾರಿಗೆ ಅಂಪೈರ್ ಮೇಲ್ಮನವಿ ಪರಾಮರ್ಶೆ(ಡಿಆರ್‌ಎಸ್) ಅನ್ನು ಅಳವಡಿಸಿಕೊಂಡಿದ್ದು ಮುಂಬೈ ವಿರುದ್ಧದ ಪಂದ್ಯದಲ್ಲಿ ಡಿಆರ್‌ಎಸ್ ನಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ನಾಟೌಟ್ ನೀಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. 
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನಡೆದ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ನಡುವಿನ ಪಂದ್ಯದಲ್ಲಿ ಮುಂಬೈ 46 ರನ್ ಗಳಿಂದ ಜಯ ಗಳಿಸಿತ್ತು. ಈ ಪಂದ್ಯದ 19ನೇ ಓವರ್ ನ ಕ್ರಿಸ್ ವೋಕ್ಸ್ ಬೌಲಿಂಗ್ ನ ಎರಡನೇ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಅವರ ಬ್ಯಾಟ್ ಗೆ ತಾಗಿ ಕೀಪರ್ ಕೈ ಸೇರಿತು. ಅಂಪೈರ್ ಸಹ ಔಟ್ ತೀರ್ಪು ನೀಡಿದ್ದರು. 
ಆದರೆ ಈ ವೇಳೆ ಹಾರ್ದಿಕ್ ಪಾಂಡ್ಯ ಡಿಆರ್ಎಸ್ ಗೆ ಮೇಲ್ಮನವಿ ಮಾಡಿದರು. ನಂತರ ಪರಿಶೀಲಿಸಿದ ಮೂರನೇ ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿದರು. ದೃಶ್ಯಗಳ ಪರಿಶೀಲನೆ ವೇಳೆ ಬಾಲ್ ಬ್ಯಾಟ್ ಗೆ ತಾಗಿರುವುದು ಕಂಡಬಂದಿದ್ದರು. ಮೂರನೇ ಅಂಪೈರ್ ಮಾತ್ರ ನಾನೌಟ್ ತೀರ್ಪು ನೀಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. 
ಇನ್ನು ಡಿಆರ್ಎಸ್ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ವಿರಾಟ್ ಕೊಹ್ಲಿ ಮೈದಾನದ ಅಂಪೈರ್ ಬಳಿ ಚರ್ಚೆ ನಡೆಸಿದರು. ಆದರೆ ಇದರಿಂದ ಪ್ರಯೋಜನವಿಲ್ಲ ಎಂದು ಭಾವಿಸಿ ಹಿಂತಿರುಗಿದರು. 
ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 17 ರನ್ ಪೇರಿಸಿದ್ದು ದೊಡ್ಡ ವಿಷಯವೇನಲ್ಲ. ಆದರೆ ಡಿಆರ್ಎಸ್ ನಲ್ಲೂ ನ್ಯಾಯಯೂತ ತೀರ್ಪು ಸಿಗದಿದ್ದರೆ ಇನ್ನೇನು ಎಂಬ ಪ್ರಶ್ನೆ ಮೂಡುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT