ಸಂಗ್ರಹ ಚಿತ್ರ 
ಕ್ರಿಕೆಟ್

ಮುಂಬೈ-ಆರ್ಸಿಬಿ ಪಂದ್ಯದಲ್ಲಿ 3ನೇ ಅಂಪೈರ್ ಎಡವಟ್ಟು; ಉಮೇಶ್ ಯಾದವ್ ಔಟ್ ಪ್ರಮಾದ!

ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ನಡುವಿನ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ಹಾರ್ದಿಕ್ ಪಾಂಡ್ಯ ಅವರ ನಾಟೌಟ್...

ಮುಂಬೈ: ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ನಡುವಿನ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ಹಾರ್ದಿಕ್ ಪಾಂಡ್ಯ ಅವರ ನಾಟೌಟ್ ತೀರ್ಪು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಆರ್ಸಿಬಿ ತಂಡದ ವೇಗಿ ಉಮೇಶ್ ಯಾದವ್ ಅವರ ಔಟ್ ಕುರಿತಂತೆ ಮೂರನೇ ಅಂಪೈರ್ ಮತ್ತೊಂದು ಪ್ರಮಾದ ಎಸಗಿದ್ದಾರೆ. 
ಗೆಲುವಿಗಾಗಿ ಆರ್ಸಿಬಿ ಹೋರಾಟ ನಡೆಸುತ್ತಿದ್ದಾಗ 18 ಓವರ್ ಅಂತ್ಯಕ್ಕೆ 8 ವಿಕೆಟ್ ಗೆ 137 ರನ್ ಗಳಿಸಿತ್ತು. ಈ ವೇಳೆ ಜಸ್ ಪ್ರೀತ್ ಬುಮ್ರಾ ಎಸೆದ ಓವರ್ ನಲ್ಲಿ ಉಮೇಶ್ ಯಾದವ್ ಕ್ಯಾಚ್ ನೀಡಿ ಔಟಾದರು. ಡಗೌಟ್ ಕಡೆಗೆ ಹೋಗುತ್ತಿದ್ದ ಉಮೇಶ್ ಯಾದವ್ ರನ್ನು ನೋಬಾಲ್ ಪರಿಶೀಲನೆಗಾಗಿ ಅಂಪೈರ್ ತಡೆದರು. 
ಈ ವೇಳೆ ಪರಿಶೀಲನೆ ನಡೆಸಿದ ಮೂರನೇ ಅಂಪೈರ್ ಪರಿಶೀಲನೆ ಮಾಡಿದ ವಿಡಿಯೋದ ನಾನ್ ಸ್ಟ್ರೈಕರ್ ಎಂಡ್ ನಲ್ಲಿ ಉಮೇಶ್ ಯಾದವ್ ಕಂಡಿದ್ದರು. ಉಮೇಶ್ ಗೆ ಎಸೆದ ಎಸೆತದ ಬದಲು ತಂಡದ ನಾಯಕ ವಿರಾಟ್ ಕೊಹ್ಲಿ ಎದುರಿಸಿದ ಎಸೆತವನ್ನು ಮೂರನೇ ಅಂಪೈರ್ ಪರಿಶೀಲನೆ ಮಾಡಿದ್ದರು. 
ಈ ವೇಳೆ ಅಂಪೈರ್ ಪ್ರಮಾದವನ್ನು ಯಾರು ಸೂಕ್ಷ್ಮವಾಗಿ ಪರಿಶೀಲಿಸಲಿಲ್ಲ. ಜತೆಗೆ ಆರ್ಸಿಬಿ ಸೋಲಿನ ಖಚಿತತೆ ಇದ್ದಿದ್ದರಿಂದ ದೊಡ್ಡ ವಿವಾದ ಕೂಡ ಆಗಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT