ಸಂಗ್ರಹ ಚಿತ್ರ 
ಕ್ರಿಕೆಟ್

ಕೋಚ್ ಹುದ್ದೆಯಿಂದ ಅನಿಲ್ ಕುಂಬ್ಳೆ ಕೆಳಗಿಳಿಸೋಕೆ ಕ್ಯಾಪ್ಟನ್ ಕೊಹ್ಲಿ ಹೆಣೆದಿದ್ದ ಸಂಚು ಬಯಲು!

ಟೀಂ ಇಂಡಿಯಾ ಪ್ರಧಾನ ಕೋಚ್ ಹುದ್ದೆಯಿಂದ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ಕೆಳಗಿಳಿಸಲು ಕ್ಯಾಪ್ಟನ್ ಕೊಹ್ಲಿ ಹೆಣಿದಿದ್ದ ಸಂಚು ಬಯಲಾಗಿದ್ದು, ಬಿಸಿಸಿಐದೆ ಕೊಹ್ಲಿ ರವಾನಿಸುತ್ತಿದ್ದ ರಹಸ್ಯ ಇ-ಮೇಲ್ ಗಳಿಂದ ಈ ವಿಚಾರ ಬಹಿರಂಗವಾಗಿದೆ.

ನವದೆಹಲಿ: ಟೀಂ ಇಂಡಿಯಾ ಪ್ರಧಾನ ಕೋಚ್ ಹುದ್ದೆಯಿಂದ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ಕೆಳಗಿಳಿಸಲು ಕ್ಯಾಪ್ಟನ್ ಕೊಹ್ಲಿ ಹೆಣಿದಿದ್ದ ಸಂಚು ಬಯಲಾಗಿದ್ದು, ಬಿಸಿಸಿಐದೆ ಕೊಹ್ಲಿ ರವಾನಿಸುತ್ತಿದ್ದ ರಹಸ್ಯ ಇ-ಮೇಲ್ ಗಳಿಂದ ಈ ವಿಚಾರ ಬಹಿರಂಗವಾಗಿದೆ.
ಅನಿಲ್ ಕುಂಬ್ಳೆ ಟೀಂ ಇಂಡಿಯಾದ ಕೋಚ್ ಹುದ್ದೆಗೆ ರಾಜೀನಾಮೆ ನೀಡಲು ವಿರಾಟ್ ಕೊಹ್ಲಿ ಬಿಸಿಸಿಐಗೆ ಕಳುಹಿಸಿದ ಇಮೇಲ್ ಕಾರಣ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಕೊಹ್ಲಿ ಬಿಸಿಸಿಐ ಸಮಿತಿಗೆ ಕಳುಹಿಸಿದ್ದ ಇ-ಮೇಲ್ ಹಾಗೂ ಕೆಲವು ಸಂದೇಶಗಳು ಲಿಕ್ ಆಗಿವೆ ಎಂದು ವರದಿಯಲ್ಲಿ ಹೇಳಲಾಗಿದ್ದು, ಕುಂಬ್ಳೆ ಕುರಿತು ನಾಯಕ ವಿರಾಟ್ ಕೊಹ್ಲಿ ಸತತವಾಗಿ ಬಿಸಿಸಿಐ ಮುಖ್ಯ ಕಾರ್ಯದರ್ಶಿ ರಾಹುಲ್ ಜೋಹ್ರಿ ಅವರಿಗೆ ನಿರಂತರ ಇ-ಮೇಲ್ ಸಂದೇಶ ರವಾನಿಸುತ್ತಿದ್ದರು ಎಂದು ಹೇಳಲಾಗಿದೆ.
ಅನಿಲ್ ಕುಂಬ್ಳೆ ಕಳೆದ ವರ್ಷ ತಂಡದ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆದರೆ ಕುಂಬ್ಳೆ ಅವಧಿಯಲ್ಲಿ ಆಡಿದ್ದ 17 ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ಪಂದ್ಯದಲ್ಲಿ ಮಾತ್ರ ಸೋಲುಂಡಿತ್ತು. ಕುಂಬ್ಳೆ ಕೋಚಿಂಗ್ ನಲ್ಲಿ ತಂಡ ಉನ್ನತ ಮಟ್ಟದಲ್ಲಿ ಪ್ರದರ್ಶನ ನೀಡುತ್ತಿದ್ದರೂ ಕೋಚ್ ಅವಧಿ ಮುಗಿಯುತ್ತಿದಂತೆ ರಾಜೀನಾಮೆ ನೀಡಿ ಹೊರಬಂದಿದ್ದರು. ಕುಂಬ್ಳೆ ರಾಜಿನಾಮೆಗೆ ವಿರಾಟ್ ಕೊಹ್ಲಿ ಅವರ ಇ-ಮೇಲ್ ಗಳೇ ಕಾರಣ ಎಂದು ಹೇಳಲಾಗುತ್ತಿದೆ.  ಆ ಬಳಿಕ ಕೊಹ್ಲಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ರವಿಶಾಸ್ತ್ರಿ ಅವರು ಕೋಚ್ ಆಗಿ ನೇಮಕಗೊಂಡಿದ್ದರು.
ಇದಕ್ಕೂ ಮೊದಲು ಟೀಂ ಇಂಡಿಯಾ ಕೋಚ್ ಆಯ್ಕೆ ಸಂದರ್ಭದಲ್ಲಿ ಹಾಲಿ ಕೋಚ್ ರವಿಶಾಸ್ತ್ರಿ ಕೂಡ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ಕ್ರಿಕೆಟ್ ಸಲಹಾ ಸಮಿತಿಯಲ್ಲಿದ್ದ ಸಚಿನ್, ವಿವಿಎಸ್ ಲಕ್ಷ್ಮಣ್, ಸೌರವ್ ಗಂಗೂಲಿ ಅವರು ಕುಂಬ್ಳೆ ಅವರನ್ನು ಶಿಫಾರಸ್ಸು ಮಾಡಿದ್ದರು. ಅಲ್ಲದೇ ಒಂದು ವರ್ಷದ ಕಾಲ ತಂಡದ ಕೋಚ್ ಆಗಿದ್ದ ಕುಂಬ್ಳೆ ಮುಂದಾಳತ್ವದಲ್ಲಿ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟಿನಲ್ಲಿ ನಂ.1 ಪಟ್ಟಕ್ಕೆೇರಿತ್ತು. ಕುಂಬ್ಳೆ ಕೂಡ ತಮ್ಮ ರಾಜೀನಾಮೆ ಬಳಿಕ ತಂಡದ ನಾಯಕ ಹಾಗೂ ತಮ್ಮ ಶೈಲಿ ಹೊಂದಾಣಿಕೆ ಆಗುತ್ತಿಲ್ಲ ಎಂದು ತಿಳಿಸಿದ್ದರು.
ಈ ಹಿಂದೆ ಕೂಡ ಅನಿಲ್ ಕುಂಬ್ಳೆ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿದ್ದ ಟೀಂ ಇಂಡಿಯಾ ಮಾಜಿ ಆಟಗಾರ ಬಿಶನ್ ಸಿಂಗ್, ತಂಡದಲ್ಲಿ ಒಬ್ಬರ ಮಾತು ಮಾತ್ರ ನಡೆಯುತ್ತಿದ್ದು, ಅದು ನಾಯಕ ವಿರಾಟ್ ಕೊಹ್ಲಿ ಅವರದ್ದು ಮಾತ್ರ. ಅವರು ತಂಡದಲ್ಲಿ ಒಂದು ರೀತಿಯಲ್ಲಿ ರಾಜನಂತೆ ವರ್ತಿಸುತ್ತಿದ್ದಾರೆ. ಅದ್ದರಿಂದಲೇ ಕುಂಬ್ಳೆ ರಾಜೀನಾಮೆ ನೀಡಿದ್ದಾರೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT