ಸಂಗ್ರಹ ಚಿತ್ರ 
ಕ್ರಿಕೆಟ್

ವಿಶ್ವಕಪ್ ಗೆದ್ದ ಭಾರತ ಕಿರಿಯರಿಗೆ ಬಿಸಿಸಿಐ ಬಹುಮಾನ ಘೋಷಣೆ

ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಹುಮಾನ ಘೋಷಣೆ ಮಾಡಿದೆ.

ನವದೆಹಲಿ: ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್  ನಿಯಂತ್ರಣ ಮಂಡಳಿ ಬಹುಮಾನ ಘೋಷಣೆ ಮಾಡಿದೆ.
ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಬಿಸಿಸಿಐ, ತಂಡದ ಆಟಗಾರರಿಗೆ ಮತ್ತು ಕೋಚ್ ರಾಹುಲ್ ದ್ರಾವಿಡ್, ಸಹಾಯಕ ಕೋಚ್ ಗಳಿಗೆ ಶುಭ ಹಾರೈಸಿದೆ. ಅಲ್ಲದೆ ತಂಡಕ್ಕೆ ಬಹುಮಾನ ಘೋಷಣೆ  ಮಾಡಲಾಗಿದ್ದು, ಟೂರ್ನಿಯುದ್ದಕ್ಕೂ ಮತ್ತು ಟೂರ್ನಿ ಆರಂಭಕ್ಕೂ ಮುನ್ನ ವಿಶ್ವಕಪ್ ಗಾಗಿ ತಂಡವನ್ನು ಸಜ್ಜುಗೊಳಿಸಿದ್ದ ಕೋಚ್ ರಾಹುಲ್ ದ್ರಾವಿಡ್ ಅವರಿಗೆ 50 ಲಕ್ಷ ರೂ ಬಹುಮಾನ ಘೋಷಣೆ ಮಾಡಿದ್ದು, ತಂಡದ ಎಲ್ಲ  ಆಟಗಾರರಿಗೂ ತಲಾ 30 ಲಕ್ಷ ರೂ ನೀಡುವ ಕುರಿತು ಘೋಷಣೆ ಮಾಡಿದೆ. 
ಅಲ್ಲದೆ ತಂಡದ ಸಹಾಯಕ ಕೋಚ್ ಹಾಗೂ ಸಹಾಯಕ ಸಿಬ್ಹಂದಿಗಳಿಗೂ ಬಹುಮಾನ ಘೋಷಣೆ ಮಾಡಲಾಗಿದ್ದು, ಎಲ್ಲ ಸಿಬ್ಬಂದಿಗಳಿಗೂ ತಲಾ 20 ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT