ಸಂಗ್ರಹ ಚಿತ್ರ 
ಕ್ರಿಕೆಟ್

ವಿಶ್ವಕಪ್ ಗೆದ್ದ ಭಾರತ ಕಿರಿಯರಿಗೆ ಬಿಸಿಸಿಐ ಬಹುಮಾನ ಘೋಷಣೆ

ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಹುಮಾನ ಘೋಷಣೆ ಮಾಡಿದೆ.

ನವದೆಹಲಿ: ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್  ನಿಯಂತ್ರಣ ಮಂಡಳಿ ಬಹುಮಾನ ಘೋಷಣೆ ಮಾಡಿದೆ.
ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಬಿಸಿಸಿಐ, ತಂಡದ ಆಟಗಾರರಿಗೆ ಮತ್ತು ಕೋಚ್ ರಾಹುಲ್ ದ್ರಾವಿಡ್, ಸಹಾಯಕ ಕೋಚ್ ಗಳಿಗೆ ಶುಭ ಹಾರೈಸಿದೆ. ಅಲ್ಲದೆ ತಂಡಕ್ಕೆ ಬಹುಮಾನ ಘೋಷಣೆ  ಮಾಡಲಾಗಿದ್ದು, ಟೂರ್ನಿಯುದ್ದಕ್ಕೂ ಮತ್ತು ಟೂರ್ನಿ ಆರಂಭಕ್ಕೂ ಮುನ್ನ ವಿಶ್ವಕಪ್ ಗಾಗಿ ತಂಡವನ್ನು ಸಜ್ಜುಗೊಳಿಸಿದ್ದ ಕೋಚ್ ರಾಹುಲ್ ದ್ರಾವಿಡ್ ಅವರಿಗೆ 50 ಲಕ್ಷ ರೂ ಬಹುಮಾನ ಘೋಷಣೆ ಮಾಡಿದ್ದು, ತಂಡದ ಎಲ್ಲ  ಆಟಗಾರರಿಗೂ ತಲಾ 30 ಲಕ್ಷ ರೂ ನೀಡುವ ಕುರಿತು ಘೋಷಣೆ ಮಾಡಿದೆ. 
ಅಲ್ಲದೆ ತಂಡದ ಸಹಾಯಕ ಕೋಚ್ ಹಾಗೂ ಸಹಾಯಕ ಸಿಬ್ಹಂದಿಗಳಿಗೂ ಬಹುಮಾನ ಘೋಷಣೆ ಮಾಡಲಾಗಿದ್ದು, ಎಲ್ಲ ಸಿಬ್ಬಂದಿಗಳಿಗೂ ತಲಾ 20 ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT