ರಾಹುಲ್ ದ್ರಾವಿಡ್ 
ಕ್ರಿಕೆಟ್

ಭಾರತ ಅಂಡರ್ 19 ಚಾಂಪಿಯನ್: ಕೋಚ್ ರಾಹುಲ್ ದ್ರಾವಿಡ್ ಪರಿಶ್ರಮಕ್ಕೆ ಸಿಕ್ಕ ಫಲ!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಂಡರ್ 19 ವಿಶ್ವಕಪ್ ಪಂದ್ಯಾವಳಿಯಲ್ಲಿ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಮೈದಾನಕ್ಕೆ ಇಳಿದಿದ್ದ ಯುವ ಪಡೆ...

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಂಡರ್ 19 ವಿಶ್ವಕಪ್ ಪಂದ್ಯಾವಳಿಯಲ್ಲಿ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಮೈದಾನಕ್ಕೆ ಇಳಿದಿದ್ದ ಯುವ ಪಡೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. 
ನ್ಯೂಜಿಲೆಂಡ್ ನ ಬೇಓವಲ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 8 ವಿಕೆಟ್ ಗಳಿಂದ ಭಾರತ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಇದು ಕೋಚ್ ರಾಹುಲ್ ದ್ರಾವಿಡ್ ಅವರ ಪರಿಶ್ರಮಕ್ಕೆ ಸಿಕ್ಕ ಫಲ.
ಹೌದು ಯುವ ಪಡೆಯನ್ನು ಕಟ್ಟುವಲ್ಲಿ ರಾಹುಲ್ ದ್ರಾವಿಡ್ ಅವಿರತ ಶ್ರಮಿಸಿದ್ದಾರೆ. ಪಂದ್ಯಾವಳಿಯಲ್ಲಿ ತಂಡವನ್ನು ಚಾಂಪಿಯನ್ ಮಾಡಲೇಬೇಕು ಎಂಬ ಹಟದೊಂದಿಗೆ ಯುವ ಪಡೆಯೊಂದಿಗೆ ದ್ರಾವಿಡ್ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಂಡಿದ್ದರು. 
ಕಿರಿಯ ಕ್ರಿಕೆಟಿಗರ ಗಮನವೆಲ್ಲ ಆಟದತ್ತ ಹಾಗೂ ಗುರಿಯತ್ತ ಕೇಂದ್ರೀಕೃತವಾಗಬೇಕೆಂಬ ಉದ್ದೇಶದಿಂದ ಫೈನಲ್ ಪಂದ್ಯದ ತನಕ ಮೊಬೈಲ್ ಸ್ವಿಚ್ ಆಫ್ ಮಾಡುವಂತೆ ಕೋಚ್ ದ್ರಾವಿಡ್ ಸೂಚಿಸಿದ್ದರು. ಇಂತಹ ಕಟ್ಟುನಿಟ್ಟಿನ ಆದೇಶಗಳನ್ನು ಪರಿಪಾಲಿಸಿದ್ದರಿಂದಲೇ ಇಂದು ಭಾರತ ತಂಡ ಚಾಂಪಿಯನ್ ಆಗಿದೆ. 
ಇನ್ನು ಪಂದ್ಯಾವಳಿಯಲ್ಲಿ ಆಡಿದ್ದ 6 ಪಂದ್ಯಗಳಲ್ಲೂ ಭಾರತ ತಂಡ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತ್ತು. ಭಾರತ ಲೀಗ್ ಹಂತದ ಮೊದಲ ಪಂದ್ಯದಲ್ಲೇ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ತಾವು ಬಲಿಷ್ಠ ತಂಡ ಎಂಬುದನ್ನು ಸಾಬೀತುಪಡಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT