ಸಂಗ್ರಹ ಚಿತ್ರ 
ಕ್ರಿಕೆಟ್

ಆಫ್ರಿಕಾ ವಿರುದ್ಧ 2ನೇ ಏಕದಿನ ಪಂದ್ಯ ಜಯ, ಏಕದಿನ ರ‍್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದ ಭಾರತ!

ಸೆಂಚೂರಿಯನ್‌ ನಲ್ಲಿ ಭಾನುವಾರ ನಡೆದ ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಗಳಿಸಿದ ಬೆನ್ನಲ್ಲೇ ಐಸಿಸಿ ಏಕದಿನ ರ‍್ಯಾಂಕಿಂಗ್‌ ಪಟ್ಟಿಯನ್ನು ಪರಿಷ್ಕರಿಸಿದ್ದು, ಭಾರತ ತಂಡ ಅಗ್ರ ಸ್ಥಾನಕ್ಕೇರಿದೆ.

ದುಬೈ: ಸೆಂಚೂರಿಯನ್‌ನಲ್ಲಿ ಭಾನುವಾರ ನಡೆದ ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಗಳಿಸಿದ ಬೆನ್ನಲ್ಲೇ ಐಸಿಸಿ ಏಕದಿನ ರ‍್ಯಾಂಕಿಂಗ್‌  ಪಟ್ಟಿಯನ್ನು ಪರಿಷ್ಕರಿಸಿದ್ದು, ಭಾರತ ತಂಡ ಅಗ್ರ ಸ್ಥಾನಕ್ಕೇರಿದೆ.
ಸೆಂಚೂರಿಯನ್ ನಲ್ಲಿ ನಡೆದ 2ನೇ ಏಕದಿನ ಪಂದ್ಯದ ಜಯದೊಂದಿಗೆ ಭಾರತ ತನ್ನ ಅಂಕಗಳಿಕೆಯಲ್ಲಿ ಒಂದು ಅಂಕ ಏರಿಕೆ ಮಾಡಿಕೊಳ್ಳುವ ಮೂಲಕ ಅಗ್ರ ಸ್ಥಾನಕ್ಕೇರಿದೆ. ಸರಣಿಗೂ ಮುನ್ನ 120 ಅಂಕಗಳನ್ನು ಹೊಂದಿದ್ದ ಭಾರತ  ಇದೀಗ 121 ಅಂಕಗಳನ್ನು ಹೊಂದಿದೆ. ಏಕದಿನ ಸರಣಿ ಆರಂಭಕ್ಕೆ ಮೊದಲು ಭಾರತ ಹಾಗೂ ದಕ್ಷಿಣ ಆಫ್ರಿಕ ತಲಾ 120 ಅಂಕ ಹೊಂದಿದ್ದವು. ಇದೀಗ ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕೇವಲ ಒಂದು ಅಂಕ ಮುನ್ನಡೆ ಸಾಧಿಸಿ  ತಾತ್ಕಾಲಿಕವಾಗಿ ಅಗ್ರ ಸ್ಥಾನಕ್ಕೇರಿದೆ. 
ಸರಣಿ ಆರಂಭಕ್ಕೆ ಮೊದಲು ಭಾರತ 4-2 ಅಂತರದಿಂದ ಸರಣಿ ಜಯಿಸಿದರೆ ಅಗ್ರ ಸ್ಥಾನಕ್ಕೇರಲಿದೆ ಎಂದು ಲೆಕ್ಕಾಚಾರ ಹಾಕಲಾಗಿತ್ತು. ದಕ್ಷಿಣ ಆಫ್ರಿಕ ಅಗ್ರಸ್ಥಾನ ಕಾಯ್ದುಕೊಳ್ಳಲು ಸರಣಿ ಗೆಲ್ಲಬೇಕು ಅಥವಾ ಡ್ರಾ ಸಾಧಿಸುವ  ಅಗತ್ಯವಿತ್ತು. ಆದರೆ ಇದೀಗ ಭಾರತ ಏಕದಿನದಲ್ಲಿ ನಂ.1 ಸ್ಥಾನಕ್ಕೇರಿದ್ದು, ಏಕದಿನ ರ‍್ಯಾಂಕಿಂಗ್‌ಗ್‌ನಲ್ಲಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯ 2 ಸ್ಥಾನ ಕಳೆದುಕೊಂಡು ಐದನೇ ಸ್ಥಾನಕ್ಕೆ ಕುಸಿದಿದೆ. ಇಂಗೆಂಡ್ ವಿರುದ್ಧ ಏಕದಿನ  ಸರಣಿಯಲ್ಲಿ 4 ಪಂದ್ಯಗಳನ್ನು ಸೋತಿರುವ ಆಸ್ಟ್ರೇಲಿಯಾ ರ‍್ಯಾಂಕಿಂಗ್‌ನಲ್ಲಿ ಕುಸಿತ ಕಂಡಿದೆ.
ಟಿ20ಯಲ್ಲೂ ಅಗ್ರಸ್ಥಾನಕ್ಕೇರುವ ಅವಕಾಶ
ಇನ್ನು ಈಗಾಗಲೇ ಏಕದಿನ ಮತ್ತು ಟೆಸ್ಟ್ ರ‍್ಯಾಂಕಿಂಗ್‌  ನಲ್ಲಿ ಅಗ್ರ ಸ್ಥಾನದಲ್ಲಿರುವ ಭಾರತ ಟ್ವೆಂಟಿ-20 ಮಾದರಿರ‍್ಯಾಂಕಿಂಗ್‌ ನಲ್ಲೂ ಅಗ್ರ ಸ್ಥಾನಕ್ಕೇರುವ ಅವಕಾಶ ಮುಕ್ತವಾಗಿಸಿಕೊಂಡಿದೆ. ಭಾರತ ಈಗಾಗಲೇ ಟೆಸ್ಟ್ ಕ್ರಿಕೆಟ್‌ನಲ್ಲಿ  ಅಗ್ರ ಸ್ಥಾನ ಕಾಯ್ದುಕೊಂಡಿದ್ದು, ಮುಂಬರುವ ಟಿ20 ಸರಣಿ ಗೆದ್ದರೆ ಭಾರತ ಟಿ20ಯಲ್ಲೂ ಅಗ್ರ ಸ್ಥಾನಕ್ಕೇರಲಿದೆ.
ಏಕದಿನ ರ‍್ಯಾಂಕಿಂಗ್‌ ಪಟ್ಟಿ
1. ಭಾರತ (121 ಅಂಕ), 2. ದ.ಆಫ್ರಿಕ (120), 3.ಇಂಗ್ಲೆಂಡ್ (116), 4. ನ್ಯೂಜಿಲೆಂಡ್(115), 5. ಆಸ್ಟ್ರೇಲಿಯಾ (112), 6.ಪಾಕಿಸ್ತಾನ (96), 7. ಬಾಂಗ್ಲಾದೇಶ (90), 8. ಶ್ರೀಲಂಕಾ (84), 9. ವೆಸ್ಟ್‌ಇಂಡೀಸ್ (76)  ಹಾಗೂ 10. ಜಿಂಬಾಬ್ವೆ (53)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?