ರಾಹುಲ್ ದ್ರಾವಿಡ್ 
ಕ್ರಿಕೆಟ್

ಅಂಡರ್ 19 ವಿಶ್ವಕಪ್: ಸವಾಲುಗಳು ಈಗಷ್ಟೇ ಆರಂಭವಾಗಿವೆ- ರಾಹುಲ್ ದ್ರಾವಿಡ್

ಭಾರತ ಕ್ರಿಕೆಟ್ ತಂಡದ ಅಂಡರ್-19 ವಿಭಾಗ ವಿಶ್ವಕಪ್ ಗೆದ್ದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಅಂಡರ್-19 ಕೋಚ್ ರಾಹುಲ್ ದ್ರಾವಿಡ್, ಅಂಡರ್-19 ವಿಶ್ವಕಪ್ ಗೆದ್ದ ತಂಡದಲ್ಲಿರುವ ಸದಸ್ಯರಿಗೆ ಸವಾಲುಗಳು ಇನ್ನಷ್ಟೇ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಅಂಡರ್-19 ವಿಭಾಗ ವಿಶ್ವಕಪ್ ಗೆದ್ದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಅಂಡರ್-19 ಕೋಚ್ ರಾಹುಲ್ ದ್ರಾವಿಡ್, ಅಂಡರ್-19 ವಿಶ್ವಕಪ್ ಗೆದ್ದ ತಂಡದಲ್ಲಿರುವ ಸದಸ್ಯರಿಗೆ ಸವಾಲುಗಳು ಇನ್ನಷ್ಟೇ ಆರಂಭವಾಗಲಿದೆ ಎಂದು ಹೇಳಿದ್ದಾರೆ. 
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ರಾಹುಲ್ ದ್ರಾವಿಡ್, ಇನ್ನೂ ಹಲವು ಸವಾಲುಗಳಿವೆ, ವಿಶ್ವಕಪ್ ಗೆಲ್ಲುವ ಸವಾಲಷ್ಟೇ ಮುಗಿದಿದೆ ಎಂದು ಹೇಳಿದ್ದಾರೆ. ಯುವ ತಂಡಕ್ಕೆ 14-16 ತಿಂಗಳ ಹಿಂದೆಯೇ ತರಬೇತಿ ನೀಡಲು ಪ್ರಾರಂಭಿಸಿದ್ದ ಪ್ರಕ್ರಿಯೆ ನನಗೆ ಸಮಾಧಾನ ತಂದಿದೆ. ಕೇವಲ ವಿಶ್ವಕಪ್ ಅಲ್ಲದೇ ಅಂಡರ್-19 ಆಟಗಾರರನ್ನು ತಯಾರಿ ಮಾಡುವ ಒಟ್ಟಾರೆ ಪ್ರಕ್ರಿಯೆ ನನಗೆ ಸಮಾಧಾನ ತಂದಿದೆ, ನಾವು ಉತ್ತಮವಾದ ಪ್ರಕ್ರಿಯೆಯನ್ನು ಅಳವಡಿಸಿಕೊಂಡಿದ್ದೇವೆ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ. 
ಸಹ ಸಿಬ್ಬಂದಿಗಳು ನೀಡಿದ ಸಹಕಾರ, ಗುಣ ಮಟ್ಟದ ಸಿಬ್ಬಂದಿಗಳು ಅತ್ಯುತ್ತಮವಾಗಿದ್ದು ನನಗೆ ಮತ್ತಷ್ಟು ಸಂತಸ ಉಂಟು ಮಾಡಿದೆ, ಆಯ್ಕೆ ಮಾಡುವವರು, ಎನ್ ಸಿಎ ಸಹ ಅತ್ಯುತ್ತಮವಾದ ಟೀಂ ವರ್ಕ್ ಮಾಡಿದ್ದಾರೆ ಎಂದು ದ್ರಾವಿಡ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT