ಝುಲನ್ ಗೋಸ್ವಾಮಿ 
ಕ್ರಿಕೆಟ್

ಗಾಯದ ಸಮಸ್ಯೆ: ದಕ್ಷಿಣ ಆಫ್ರಿಕಾ ವಿರುದ್ಧ ಟಿ 20 ಸರಣಿಯಿಂದ ಹೊರಗುಳಿದ ಝುಲನ್ ಗೋಸ್ವಾಮಿ

ಗಾಯದ ಸಮಸ್ಯೆಯ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಮಹಿಳಾ ಕ್ರಿಕೆಟ್ ಸರಣಿಯಿಂದ ಭಾರತ ತಂಡದ ಹಿರಿಯ ಆಟಗಾರ್ತಿ ಝುಲನ್ ಗೋಸ್ವಾಮಿ ಹೊರಗುಳಿಯಲಿದ್ದಾರೆ.

ಪೊಟ್ಚೆಸ್ಟ್ರೋಮ್ (ದಕ್ಷಿಣ ಆಫ್ರಿಕಾ): ಗಾಯದ ಸಮಸ್ಯೆಯ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಮಹಿಳಾ ಕ್ರಿಕೆಟ್ ಸರಣಿಯಿಂದ ಭಾರತ ತಂಡದ ಹಿರಿಯ ಆಟಗಾರ್ತಿ ಝುಲನ್ ಗೋಸ್ವಾಮಿ ಹೊರಗುಳಿಯಲಿದ್ದಾರೆ.
ಗೋಸ್ವಾಮಿಯವರಿಗೆ ಕಾಲಿನ  ಭಾಗದಲ್ಲಿ ಗಾಯವಾಗಿದ್ದು ಸೋಮವಾರ ಅವರು ಎಂಆರ್ ಐ ಸ್ಕಾನ್ ಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ಹೇಳಿದೆ. ಮೂಳೆಗಳ ಮೇಲಿನ ಯಾವ ಹೆಚ್ಚಿನ ಒತ್ತಡ ತಪ್ಪಿಸುವ ಸಲುವಾಗಿ ಅವರಿಗೆ ಕಲ ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಅಗತ್ಯವಿದೆ  ಎಂದು ಬಿಸಿಸಿಐ ವೈದ್ಯಕೀಯ ತಂಡದೊಡನೆ ಮಾತನಾಡಿದ ಸ್ಥಳೀಯ ವೈದ್ಯರು ಹೇಳಿದ್ದಾರೆ.
ಆಫ್ರಿಕಾದಿಂದ ಹಿಂದಿರುಗಿದ ನಂತರ, ಗೋಸ್ವಾಮಿ ಕಾಲುಗಳ ತಜ್ಞರನ್ನು ಭೇಟಿಯಾಗಲಿದ್ದು ಬೆಂಗಳೂರಿನ ಎನ್ ಸಿಎ ನಲ್ಲಿ ಪುನಶ್ಚೇತನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಹಿಂದೆ ನಡೆದ ಮೂರು ಪಂದ್ಯಗಳ ಮಹಿಳಾ ಏಕದಿನ ಸರಣಿಯಲ್ಲಿ ಗೋಸ್ವಾಮಿ ಐದು ವಿಕೆಟ್ ಗಳನ್ನು ಗಳಿಸಿದ್ದರು, ಸರಣಿಯಲ್ಲಿ ಭಾರತ 2-1 ಅಂತರದ ಜಯ ದಾಖಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT