ಝುಲನ್ ಗೋಸ್ವಾಮಿ 
ಕ್ರಿಕೆಟ್

ಗಾಯದ ಸಮಸ್ಯೆ: ದಕ್ಷಿಣ ಆಫ್ರಿಕಾ ವಿರುದ್ಧ ಟಿ 20 ಸರಣಿಯಿಂದ ಹೊರಗುಳಿದ ಝುಲನ್ ಗೋಸ್ವಾಮಿ

ಗಾಯದ ಸಮಸ್ಯೆಯ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಮಹಿಳಾ ಕ್ರಿಕೆಟ್ ಸರಣಿಯಿಂದ ಭಾರತ ತಂಡದ ಹಿರಿಯ ಆಟಗಾರ್ತಿ ಝುಲನ್ ಗೋಸ್ವಾಮಿ ಹೊರಗುಳಿಯಲಿದ್ದಾರೆ.

ಪೊಟ್ಚೆಸ್ಟ್ರೋಮ್ (ದಕ್ಷಿಣ ಆಫ್ರಿಕಾ): ಗಾಯದ ಸಮಸ್ಯೆಯ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಮಹಿಳಾ ಕ್ರಿಕೆಟ್ ಸರಣಿಯಿಂದ ಭಾರತ ತಂಡದ ಹಿರಿಯ ಆಟಗಾರ್ತಿ ಝುಲನ್ ಗೋಸ್ವಾಮಿ ಹೊರಗುಳಿಯಲಿದ್ದಾರೆ.
ಗೋಸ್ವಾಮಿಯವರಿಗೆ ಕಾಲಿನ  ಭಾಗದಲ್ಲಿ ಗಾಯವಾಗಿದ್ದು ಸೋಮವಾರ ಅವರು ಎಂಆರ್ ಐ ಸ್ಕಾನ್ ಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ಹೇಳಿದೆ. ಮೂಳೆಗಳ ಮೇಲಿನ ಯಾವ ಹೆಚ್ಚಿನ ಒತ್ತಡ ತಪ್ಪಿಸುವ ಸಲುವಾಗಿ ಅವರಿಗೆ ಕಲ ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಅಗತ್ಯವಿದೆ  ಎಂದು ಬಿಸಿಸಿಐ ವೈದ್ಯಕೀಯ ತಂಡದೊಡನೆ ಮಾತನಾಡಿದ ಸ್ಥಳೀಯ ವೈದ್ಯರು ಹೇಳಿದ್ದಾರೆ.
ಆಫ್ರಿಕಾದಿಂದ ಹಿಂದಿರುಗಿದ ನಂತರ, ಗೋಸ್ವಾಮಿ ಕಾಲುಗಳ ತಜ್ಞರನ್ನು ಭೇಟಿಯಾಗಲಿದ್ದು ಬೆಂಗಳೂರಿನ ಎನ್ ಸಿಎ ನಲ್ಲಿ ಪುನಶ್ಚೇತನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಹಿಂದೆ ನಡೆದ ಮೂರು ಪಂದ್ಯಗಳ ಮಹಿಳಾ ಏಕದಿನ ಸರಣಿಯಲ್ಲಿ ಗೋಸ್ವಾಮಿ ಐದು ವಿಕೆಟ್ ಗಳನ್ನು ಗಳಿಸಿದ್ದರು, ಸರಣಿಯಲ್ಲಿ ಭಾರತ 2-1 ಅಂತರದ ಜಯ ದಾಖಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT