ಸಂಗ್ರಹ ಚಿತ್ರ 
ಕ್ರಿಕೆಟ್

ಕೊಹ್ಲಿ ಬ್ಯಾಟಿಂಗ್ ಬಣ್ಣನೆಗೆ ಹೊಸ ನಿಘಂಟು ಬೇಕು: ಕೋಚ್ ರವಿಶಾಸ್ತ್ರಿ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಟೂರ್ನಿಯಲ್ಲಿ ಮೂರನೇ ಶತಕ ಸಿಡಿಸಿ ತಂಡಕ್ಕೆ ಅಮೋಘ ಗೆಲುವು ತಂದಿತ್ತ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಕೋಚ್ ರವಿಶಾಸ್ತ್ರಿ ಮುಕ್ತಕಂಠದಿಂದ ಶ್ಲಾಘಿಸಿದ್ದು, ಕೊಹ್ಲಿ ಬಣ್ಣನೆಗೆ ಹೊಸ ನಿಘಂಟು ಬೇಕು ಎಂದು ಹೇಳಿದ್ದಾರೆ.

ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಟೂರ್ನಿಯಲ್ಲಿ ಮೂರನೇ ಶತಕ ಸಿಡಿಸಿ ತಂಡಕ್ಕೆ ಅಮೋಘ ಗೆಲುವು ತಂದಿತ್ತ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಕೋಚ್ ರವಿಶಾಸ್ತ್ರಿ ಮುಕ್ತಕಂಠದಿಂದ ಶ್ಲಾಘಿಸಿದ್ದು,  ಕೊಹ್ಲಿ ಬಣ್ಣನೆಗೆ ಹೊಸ ನಿಘಂಟು ಬೇಕು ಎಂದು ಹೇಳಿದ್ದಾರೆ.
ಸೆಂಚೂರಿಯನ್ ನಲ್ಲಿ ನಡೆದ ಟೂರ್ನಿಯ ಆರನೇ ಹಾಗೂ ಅಂತಿಮ ಪಂದ್ಯದಲ್ಲಿ ಕೊಹ್ಲಿ, ಅಜೇಯ 129 ರನ್ ಗಳಿಸಿ ತಂಡಕ್ಕೆ 8 ವಿಕೆಟ್ ಭರ್ಜರಿ ಜಯ ತಂದಿತ್ತಿದ್ದರು. ಪಂದ್ಯದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಟೂರ್ನಿಯಲ್ಲಿ ಕೊಹ್ಲಿ  ಪ್ರದರ್ಶನದ ಕುರಿತು ಮಾತನಾಡಿದ ಕೋಚ್ ರವಿಶಾಸ್ತ್ರಿ, ಕೊಹ್ಲಿ ಬ್ಯಾಟಿಂಗ್ ಕಲೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ರವಿಶಾಸ್ತ್ರಿ, ಬಹುಶಃ ನೀವು ಕೊಹ್ಲಿ ಬ್ಯಾಟಿಂಗ್ ಪ್ರದರ್ಶನದ  ಕುರಿತು ಬರೆಯಲು ಹೊಸ ಪದಗಳಿಗಾಗಿ ಹುಡುಕುತ್ತಿರಬಹುದು. ಕೊಹ್ಲಿ ಬ್ಯಾಟಿಂಗ್ ಪ್ರದರ್ಶನ ಬಣ್ಣಿಸಲು ಹೊಸ ಆಕ್ಸ್ ಫರ್ಡ್ ನಿಘಂಟು ಬೇಕು ಎಂದೆನಿಸುತ್ತದೆ ಎಂದು ಶಾಸ್ತ್ರಿ ಹೇಳಿದ್ದಾರೆ.
ಅಂತೆಯೇ ಕೊಹ್ಲಿ ಬ್ಯಾಟಿಂಗ್ ನಿಂದಾಗಿ ತಂಡದ ಮೇಲಾಗಿರುವ ಪರಿಣಾಮದ ಕುರಿತು ಮಾತನಾಡಿದ ಶಾಸ್ತ್ರಿ ಕೊಹ್ಲಿ ಬ್ಯಾಟಿಂಗ್ ನಿಂದಾಗಿ ತಂಡದ ಇತರೆ ಸದಸ್ಯರು ತುಂಬಾ ಸ್ಪೂರ್ತಿ ಪಡೆದಿದ್ದಾರೆ. 6 ಪಂದ್ಯಗಳಲ್ಲಿ 500 ಅಧಿಕ ರನ್  ಗಳಿಸಿರುವುದೇ ಕೊಹ್ಲಿ ಪ್ರದರ್ಶನವನ್ನು ತೋರುತ್ತದೆ ಎಂದು ಶಾಸ್ತ್ರಿ ಹೇಳಿದ್ದಾರೆ.
ನಿನ್ನೆ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ ಗಳ ಅಂತರದಲ್ಲಿ ಜಯಿಸಿದ್ದು ಮಾತ್ರವಲ್ಲದೇ 6 ಪಂದ್ಯಗಳ ಸರಣಿಯನ್ನು 5-1 ಅಂತರದಲ್ಲಿ ಮಣಿಸಿತ್ತು. ಅಲ್ಲದೆ ಇದೇ  ಟೂರ್ನಿಯಿಂದಲೇ ಭಾರತ ಏಕದಿನ ಕ್ರಿಕೆಟ್ ನ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT