ಸಂಗ್ರಹ ಚಿತ್ರ 
ಕ್ರಿಕೆಟ್

ಕೆಳ ಕ್ರಮಾಂಕದಲ್ಲಿ ಧೋನಿ ಬ್ಯಾಟಿಂಗ್ ಗೆ ಕೊಹ್ಲಿಯ ಭಯ ಕಾರಣ: ವಿರೇಂದ್ರ ಸೆಹ್ವಾಗ್

ಪದೇ ಪದೇ ಮುಗ್ಗರಿಸುತ್ತಿರುವ ಭಾರತ ತಂಡದ ಮಧ್ಯಮ ಕ್ರಮಾಂಕ ಹಾಗೂ ಮಹೇಂದ್ರ ಸಿಂಗ್ ಧೋನಿ ಅವರ ಕೆಳ ಕ್ರಮಾಂಕದ ಬ್ಯಾಟಿಂಗ್ ಗೆ ನಾಯಕ ವಿರಾಟ್ ಕೊಹ್ಲಿಯ ಭಯ ಕಾರಣ ಎಂದು ಭಾರತ ತಂಡದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಪದೇ ಪದೇ  ಮುಗ್ಗರಿಸುತ್ತಿರುವ ಭಾರತ ತಂಡದ ಮಧ್ಯಮ ಕ್ರಮಾಂಕ ಹಾಗೂ ಮಹೇಂದ್ರ ಸಿಂಗ್ ಧೋನಿ ಅವರ ಕೆಳ ಕ್ರಮಾಂಕದ ಬ್ಯಾಟಿಂಗ್ ಗೆ ನಾಯಕ ವಿರಾಟ್ ಕೊಹ್ಲಿಯ ಭಯ ಕಾರಣ ಎಂದು ಭಾರತ ತಂಡದ ಮಾಜಿ  ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಮತ್ತು ಅತ್ಯುತ್ತಮ ಫಿನಿಷರ್ ಎಂದು ಖ್ಯಾತಿ ಪಡೆದಿರುವ ಮಹೇಂದ್ರ ಸಿಂಗ್ ಧೋನಿಯನ್ನು ಕೆಳ ಕ್ರಮಾಂಕದಲ್ಲಿ ಆಡಿಸಲು ವಿರಾಟ್ ಕೊಹ್ಲಿ ಅವರ ಭಯ ಕಾರಣ ಎಂದು ಸೆಹ್ವಾಗ್ ಹೇಳಿದ್ದಾರೆ.  ಸೆಹ್ವಾಗ್ ಅಭಿಪ್ರಾಯಪಟ್ಟಿರುವಂತೆ ಪ್ರಸ್ತುತ ಭಾರತ ತಂಡದಲ್ಲಿ ಉದಯೋನ್ಮುಖ ಆಟಗಾರರಿದ್ದರೂ, ತಂಡದಲ್ಲಿ ಉತ್ತಮ ಫಿನಿಷರ್ ಗಳಿಲ್ಲ. ಹೀಗಾಗಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಕೆಳ ಕ್ರಮಾಂಕದಲ್ಲಿ  ಕೊಹ್ಲಿ  ಆಡಿಸುತ್ತಿದ್ದಾರೆ. ಆದರೆ ಧೋನಿ ಅವರನ್ನು ಕೆಳ ಕ್ರಮಾಂಕದಲ್ಲಿ ಆಡಿಸಿದ ಮಾತ್ರಕ್ಕೆ ತಂಡ ಬ್ಯಾಟಿಂಗ್ ಆರ್ಡರ್ ಸಮಸ್ಯೆ ಬಗೆಹರಿಯುತ್ತದೆ ಎಂದು ಭಾವಿಸುವಂತಿಲ್ಲ.
ಪ್ರಮುಖವಾಗಿ ಕೊಹ್ಲಿ ತಂಡದ ಬ್ಯಾಟಿಂಗ್ ಆರ್ಡರ್ ಸಮಸ್ಯೆಯನ್ನು ನೀಗಿಸಿಕೊಂಡು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಾ, ಕೇದಾರ್ ಜಾದವ್ ಮತ್ತು ಮನೀಷ್ ಪಾಂಡೆಯಂತಹ ಆಟಗಾರರನ್ನು ಫಿನಿಷರ್ ಗಳಾಗಿ ರೂಪಿಸಬೇಕು.  ಆಗ ತಂಡದ ಬ್ಯಾಟಿಂಗ್ ಆರ್ಡರ್ ಸಮಸ್ಯೆ ನೀಗುತ್ತದೆ. ಧೋನಿಗೂ ಕೂಡ ಉತ್ತಮ ಬ್ಯಾಟಿಂಗ್ ಮಾಡುವ ಅವಕಾಶ ಲಭಿಸುತ್ತದೆ ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.
ಸೆಹ್ವಾಗ್ ಪ್ರಕಾರ ಮಹೇಂದ್ರ ಸಿಂಗ್ ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡಬೇಕಂತೆ. ನಾಲ್ಕನೇ ಕ್ರಮಾಂಕದಲ್ಲಿ ಧೋನಿ ಅತ್ಯುತ್ತಮ ಆಟಗಾರರಾಗಿದ್ದು, ಇದೇ ಕ್ರಮಾಂಕದಲ್ಲಿ ಅವರನ್ನು ಆಡಿಸುವುದು ಸೂಕ್ತ ಎಂದು ಸೆಹ್ವಾಗ್  ಹೇಳಿದ್ದಾರೆ. 
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ ನಾಯಕತ್ವ ಸೂಪರ್!
ಇನ್ನು ಇದೇ ವೇಳೆ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯಲ್ಲಿ ಕೊಹ್ಲಿ ಅವರ ನಾಯಕತ್ವ ಕೊಂಡಾಡಿದ ವೀರೂ, ಆರೂ ಪಂದ್ಯಗಳನ್ನು ನಾನು ವೀಕ್ಷಿಸಿದ್ದೇನೆ. ಪ್ರತಿಯೊಂದು ಪಂದ್ಯದಲ್ಲೂ ಕೊಹ್ಲಿ ಅತ್ಯುತ್ತಮ ನಾಯಕತ್ವ ಪ್ರದರ್ಶನ  ಮಾಡಿದರು. ಸೂಕ್ತ ಸಂದರ್ಭಗಳಲ್ಲಿ ಸೂಕ್ತ ನಿರ್ಣಯ ಮತ್ತು ಬೌಲಿಂಗ್ ಬದಲಾಣೆ ಮಾಡುತ್ತ ಎದುರಾಳಿ ತಂಡದ ಬ್ಯಾಟ್ಸಮನ್ ಗಳನ್ನು ಕಟ್ಟಿಹಾಕಿದರು. ಕೊಹ್ಲಿಗೆ ಚಾಹಲ್ ಮತ್ತು ಕುಲದೀಪ್ ಯಾದವ್ ಉತ್ತಮ ಸಾಥ್ ನೀಡಿದರು  ಎಂದು ಸೆಹ್ವಾಗ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT