ಬಿಸಿಸಿಐ 
ಕ್ರಿಕೆಟ್

ಹಗಲು-ರಾತ್ರಿ ಟೆಸ್ಟ್: ಬಿಸಿಸಿಐನಲ್ಲಿ ಆಂತರಿಕ ಕಿತ್ತಾಟ!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನಲ್ಲಿ ಮತ್ತೆ ಆಂತರಿಕ ಒಳಜಗಳಗಳು ಶುರುವಾಗಿದೆ...

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನಲ್ಲಿ ಮತ್ತೆ ಆಂತರಿಕ ಒಳಜಗಳಗಳು ಶುರುವಾಗಿದೆ. 
ಭಾರತ ಪ್ರವಾಸಕ್ಕೆ ಆಗಮಿಸಲಿರುವ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಒಂದು ಹಗಲುರಾತ್ರಿ ಟೆಸ್ಟ್ ಪಂದ್ಯವನ್ನು ಆಡಿಸಲು ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌಧರಿ ನಿರ್ಧರಿಸಿದ್ದಾರೆ. ತಮ್ಮ ಗಮನಕ್ಕೂ ತಾರದೇ ಕೆಲವೇ ಕೆಲವರು ಕುಳಿತು ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಬಿಸಿಸಿಐ ನಿಯೋಜಿತ ಆಡಳಿತಾಧಿಕಾರಿ ವಿನೋದ್ ರಾಯ್ ಹರಿದಾಯ್ದಿದ್ದಾರೆ. ಜತೆಗೆ ತಾತ್ಕಾಲಿಕವಾಗಿ ಹಗಲು ರಾತ್ರಿ ಟೆಸ್ಟ್ ಆಡಿಸುವುದನ್ನು ತಡೆ ಹಿಡಿದಿದ್ದಾರೆ. 
ವಿನೋದ್ ರಾಯ್ ಅವರು ನನಗೆ ಕ್ರಿಕೆಟ್ ಗೊತ್ತಿಲ್ಲ ಅನ್ನುವುದು ಸರಿ. ನಿಮಗೆ ನನಗಿಂತ ಹೆಚ್ಚಿನ ಕ್ರಿಕೆಟ್ ಜ್ಞಾನವಿದೆ ಎನ್ನುವುದೂ ಸರಿ. ಆದರೆ ಡಯಾನಾ ಎಡುಲ್ಜಿ ನಿಮ್ಮೆಲ್ಲರಿಗಿಂತ ಹೆಚ್ಚಿನ ಕ್ರಿಕೆಟ್ ಜ್ಞಾನವಿದೆ. ಆದರೂ ನಮ್ಮೊಂದಿಗೆ ಚರ್ಚಿಸದೆ ನೀವು ಕೆಲವೇ ವ್ಯಕ್ತಿಗಳು ಕುಳಿತು ಇಂತಹ ನಿರ್ಧಾರ ತೆಗೆದುಕೊಂಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. 
ಇನ್ನು ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರ ಕೊರತೆಯನ್ನು ಆಧಾರವಾಗಿಟ್ಟುಕೊಂಡು ಕಾರ್ಯದರ್ಶಿ ಅಮಿತಾಭ್ ಚೌಧರಿ ಈ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸಲಹೆ ನೀಡಿರುವ ರವಿಶಾಸ್ತ್ರಿ. ಪಂದ್ಯವನ್ನು ಮಧ್ಯಾಹ್ನ 2ರಿಂದ ಶುರು ಮಾಡಲು ಹೇಳಿದ್ದಾರೆ. ದ್ವಿತೀಯ ದರ್ಜೆಯ ತಂಡದ ವಿರುದ್ಧ ಆಡುವಾಗ ದ್ವಿತೀಯ ಹಂತದ ನಗರಗಳನ್ನೇ ಟೆಸ್ಟ್ ಗೆ ಆಯ್ಕೆ ಮಾಡಲು ಸೂಚಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT