ಬಿಸಿಸಿಐ 
ಕ್ರಿಕೆಟ್

ಹಗಲು-ರಾತ್ರಿ ಟೆಸ್ಟ್: ಬಿಸಿಸಿಐನಲ್ಲಿ ಆಂತರಿಕ ಕಿತ್ತಾಟ!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನಲ್ಲಿ ಮತ್ತೆ ಆಂತರಿಕ ಒಳಜಗಳಗಳು ಶುರುವಾಗಿದೆ...

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನಲ್ಲಿ ಮತ್ತೆ ಆಂತರಿಕ ಒಳಜಗಳಗಳು ಶುರುವಾಗಿದೆ. 
ಭಾರತ ಪ್ರವಾಸಕ್ಕೆ ಆಗಮಿಸಲಿರುವ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಒಂದು ಹಗಲುರಾತ್ರಿ ಟೆಸ್ಟ್ ಪಂದ್ಯವನ್ನು ಆಡಿಸಲು ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌಧರಿ ನಿರ್ಧರಿಸಿದ್ದಾರೆ. ತಮ್ಮ ಗಮನಕ್ಕೂ ತಾರದೇ ಕೆಲವೇ ಕೆಲವರು ಕುಳಿತು ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಬಿಸಿಸಿಐ ನಿಯೋಜಿತ ಆಡಳಿತಾಧಿಕಾರಿ ವಿನೋದ್ ರಾಯ್ ಹರಿದಾಯ್ದಿದ್ದಾರೆ. ಜತೆಗೆ ತಾತ್ಕಾಲಿಕವಾಗಿ ಹಗಲು ರಾತ್ರಿ ಟೆಸ್ಟ್ ಆಡಿಸುವುದನ್ನು ತಡೆ ಹಿಡಿದಿದ್ದಾರೆ. 
ವಿನೋದ್ ರಾಯ್ ಅವರು ನನಗೆ ಕ್ರಿಕೆಟ್ ಗೊತ್ತಿಲ್ಲ ಅನ್ನುವುದು ಸರಿ. ನಿಮಗೆ ನನಗಿಂತ ಹೆಚ್ಚಿನ ಕ್ರಿಕೆಟ್ ಜ್ಞಾನವಿದೆ ಎನ್ನುವುದೂ ಸರಿ. ಆದರೆ ಡಯಾನಾ ಎಡುಲ್ಜಿ ನಿಮ್ಮೆಲ್ಲರಿಗಿಂತ ಹೆಚ್ಚಿನ ಕ್ರಿಕೆಟ್ ಜ್ಞಾನವಿದೆ. ಆದರೂ ನಮ್ಮೊಂದಿಗೆ ಚರ್ಚಿಸದೆ ನೀವು ಕೆಲವೇ ವ್ಯಕ್ತಿಗಳು ಕುಳಿತು ಇಂತಹ ನಿರ್ಧಾರ ತೆಗೆದುಕೊಂಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. 
ಇನ್ನು ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರ ಕೊರತೆಯನ್ನು ಆಧಾರವಾಗಿಟ್ಟುಕೊಂಡು ಕಾರ್ಯದರ್ಶಿ ಅಮಿತಾಭ್ ಚೌಧರಿ ಈ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸಲಹೆ ನೀಡಿರುವ ರವಿಶಾಸ್ತ್ರಿ. ಪಂದ್ಯವನ್ನು ಮಧ್ಯಾಹ್ನ 2ರಿಂದ ಶುರು ಮಾಡಲು ಹೇಳಿದ್ದಾರೆ. ದ್ವಿತೀಯ ದರ್ಜೆಯ ತಂಡದ ವಿರುದ್ಧ ಆಡುವಾಗ ದ್ವಿತೀಯ ಹಂತದ ನಗರಗಳನ್ನೇ ಟೆಸ್ಟ್ ಗೆ ಆಯ್ಕೆ ಮಾಡಲು ಸೂಚಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT