ವಿರಾಟ್ ಕೊಹ್ಲಿ, ಎಂಎಸ್ ಧೋನಿ 
ಕ್ರಿಕೆಟ್

ಟಿ20 ತ್ರಿಕೋನ ಸರಣಿ: ಕೊಹ್ಲಿ, ಧೋನಿ ಸೇರಿ ಐವರಿಗೆ ಕಡ್ಡಾಯ ವಿಶ್ರಾಂತಿ; ರೋಹಿತ್ ಶರ್ಮಾ ಸಾರಥ್ಯ?

ಮುಂಬರುವ ಟಿ20 ತ್ರಿಕೋನ ಸರಣಿಯಿಂದ ಟೀಂ ಇಂಡಿಯಾದ ಐವರು ಅನುಭವಿ ಆಟಗಾರರಿಗೆ ಕಡ್ಡಾಯ ವಿಶ್ರಾಂತಿ ನೀಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಿರ್ಧರಿಸಿದೆ ಎಂದು ವರದಿಯಾಗಿದೆ...

ನವದೆಹಲಿ: ಮುಂಬರುವ ಟಿ20 ತ್ರಿಕೋನ ಸರಣಿಯಿಂದ ಟೀಂ ಇಂಡಿಯಾದ ಐವರು ಅನುಭವಿ ಆಟಗಾರರಿಗೆ ಕಡ್ಡಾಯ ವಿಶ್ರಾಂತಿ ನೀಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಿರ್ಧರಿಸಿದೆ ಎಂದು ವರದಿಗಳು ಹೇಳಿವೆ.
ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ಟಿ20 ತ್ರಿಕೋನ ಸರಣಿ ನಡೆಯಲಿದ್ದು ಕಿರಿಯ ಆಟಗಾರರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಬಿಸಿಸಿಐ ಈ ತೀರ್ಮಾನಕ್ಕೆ ಬರಲಾಗಿದ್ದು ಐವರು ಆಟಗಾರರರ ಪಟ್ಟಿಯಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರ ಹೆಸರು ಮುಂಚೂಣಿಯಲ್ಲಿದೆ. 
ಇನ್ನು ಸೀಮಿತ ಓವರ್ ಗಳ ಪಂದ್ಯಗಳಲ್ಲಿ ಆಡುತ್ತಿರುವ ತಂಡದ ಮಾಜಿ ನಾಯಕ ಎಂಎಸ್ ಧೋನಿಗೂ ಸಹ ವಿಶ್ರಾಂತಿ ನೀಡಲಾಗುತ್ತಿದೆ. ಕೊಹ್ಲಿ ಮತ್ತು ಎಂಎಸ್ ಧೋನಿ ಸೇರಿದಂತೆ ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬೂಮ್ರಾ ಮತ್ತು ಹಾರ್ದಿಕ್ ಪಾಂಡ್ಯಗೆ ಟಿ20 ತ್ರಿಕೋನ ಸರಣಿಯಿಂದ ವಿಶ್ರಾಂತಿ ನೀಡಲಾಗುತ್ತದೆ ಎಂಬ ಮಾಹಿತಿ ಬಿಸಿಸಿಐ ಮೂಲಗಳಿಂದ ತಿಳಿದುಬಂದಿದೆ. 
ಸರಣಿಯಿಂದ ಕೊಹ್ಲಿ ಹೊರಗುಳಿಯುತ್ತಿರುವುದರಿಂದ ರೋಹಿತ್ ಶರ್ಮಾ ತಂಡಕ್ಕೆ ನಾಯಕತ್ವ ವಹಿಸಲಿದ್ದು ಅಜಿಂಕ್ಯ ರಹಾನೆ ಉಪನಾಯಕರಾಗಲಿದ್ದಾರೆ. ಇನ್ನು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ತ್ರಿಕೋನ ಸರಣಿಗೆ ಆಯ್ಕೆ ಸಮಿತಿ ಭಾನುವಾರ ಆಟಗಾರರ ಪಟ್ಟಿ ಪ್ರಕಟಿಸಲಿದ್ದು ಯಾವ ಯುವ ಆಟಗಾರರು ತಂಡದಲ್ಲಿ ಸ್ಥಾನಪಡೆಯುತ್ತಾರೆ ಎಂಬುದು ಕಾದುನೋಡಬೇಕಿದೆ. 
ಟಿ20 ತ್ರಿಕೋನ ಸರಣಿ ಮಾರ್ಚ್ 6ರಿಂದ ಆರಂಭಗೊಳ್ಳಲಿದೆ. ಇನ್ನು ಅದೇ ತಿಂಗಳ 18ರಂದು ಸರಣಿ ಮುಕ್ತಾಯಗೊಳ್ಳಲಿದ್ದು ಮಾರ್ಚ್ 4ರಂದು ಎಲ್ಲಾ ತಂಡಗಳು ಲಂಕಾ ನಾಡಿಗೆ ತಲುಪಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT